ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm