ಬ್ರೇಕಿಂಗ್ ನ್ಯೂಸ್
04-04-23 12:05 pm Mangalore Correspondent ಕ್ರೈಂ
ಮಂಗಳೂರು, ಎ.4: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದಾನೆಂಬ ಮಾಹಿತಿ ಆಧರಿಸಿ ಕದ್ರಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಶಿಶಿರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ವಾಸವಿದ್ದ ಶಿಶಿರ್ ಎಂಬಾತ ಬಂಧಿತ. ಆತನನ್ನು ತನಿಖೆ ನಡೆಸಿದಾಗ ಆ್ಯಂಡ್ರೂ ರೊಡ್ರಿಗಸ್ ಎಂಬಾತ ಈ ಪಿಸ್ತೂಲನ್ನು ತನಗೆ ನೀಡಿದ್ದಾಗಿ ತಿಳಿಸಿದ್ದಾನೆ.
ಆ್ಯಂಡ್ರೂ ರೊಡ್ರಿಗಸ್, 2014ರಲ್ಲಿ ಹಂಪನಕಟ್ಟೆಯಲ್ಲಿ ನಡೆದ ಕುಮಾರ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿತ್ತು. ಮಂಗಳೂರಿನಲ್ಲಿ ಜೈಲಿನಲ್ಲಿದ್ದ ರೋಡ್ರಿಗಸ್, ಬಳಿಕ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರಿನ ಕೋರ್ಟಿಗೆ ಹಾಜರಾಗಲು ಬಂದಿದ್ದಾಗ ರೋಡ್ರಿಗಸ್ ತನ್ನಲ್ಲಿದ್ದ ಪಿಸ್ತೂಲನ್ನು ಶಿಶಿರ್ ಕೈಗೆ ನೀಡಿದ್ದ.
ಶಿಶಿರ್ ಕೂಡ ಅಪರಾಧ ಹಿನ್ನೆಲೆಯ ವ್ಯಕ್ತಿಯಾಗಿದ್ದು ಬಂದರು, ಕಾವೂರು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದ. ಮೂಲತಃ ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿಯಾಗಿದ್ದ ಶಿಶಿರ್ ತನ್ನ ಅಪರಾಧ ಚಟುವಟಿಕೆ ಕಾರಣದಿಂದ ಮನೆಯವರಿಂದ ದೂರವಾಗಿದ್ದ. ಆನಂತರ, ಮಂಗಳೂರಿಗೆ ಬಂದು ಇಲ್ಲಿ ಒಬ್ಬಂಟಿಯಾಗೇ ನೆಲೆಸಿದ್ದ. ಇದೀಗ ಖಚಿತ ಮಾಹಿತಿ ಆಧರಿಸಿ ಪಿಸ್ತೂಲ್ ಹೊಂದಿದ್ದ ಕಾರಣಕ್ಕೆ ಶಿಶಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Old Accused arrested with unlicensed Gun at Kadri by Kadri Police in Mangalore. The arrested has been identified as Shishir. The gun that he was using was said to be of Andrew Rodrigues who was a murder accused. When Andrew was taken to the court the gun was handed over to Shishir.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm