ಬ್ರೇಕಿಂಗ್ ನ್ಯೂಸ್
04-04-23 12:05 pm Mangalore Correspondent ಕ್ರೈಂ
ಮಂಗಳೂರು, ಎ.4: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದಾನೆಂಬ ಮಾಹಿತಿ ಆಧರಿಸಿ ಕದ್ರಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಶಿಶಿರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ವಾಸವಿದ್ದ ಶಿಶಿರ್ ಎಂಬಾತ ಬಂಧಿತ. ಆತನನ್ನು ತನಿಖೆ ನಡೆಸಿದಾಗ ಆ್ಯಂಡ್ರೂ ರೊಡ್ರಿಗಸ್ ಎಂಬಾತ ಈ ಪಿಸ್ತೂಲನ್ನು ತನಗೆ ನೀಡಿದ್ದಾಗಿ ತಿಳಿಸಿದ್ದಾನೆ.
ಆ್ಯಂಡ್ರೂ ರೊಡ್ರಿಗಸ್, 2014ರಲ್ಲಿ ಹಂಪನಕಟ್ಟೆಯಲ್ಲಿ ನಡೆದ ಕುಮಾರ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿತ್ತು. ಮಂಗಳೂರಿನಲ್ಲಿ ಜೈಲಿನಲ್ಲಿದ್ದ ರೋಡ್ರಿಗಸ್, ಬಳಿಕ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರಿನ ಕೋರ್ಟಿಗೆ ಹಾಜರಾಗಲು ಬಂದಿದ್ದಾಗ ರೋಡ್ರಿಗಸ್ ತನ್ನಲ್ಲಿದ್ದ ಪಿಸ್ತೂಲನ್ನು ಶಿಶಿರ್ ಕೈಗೆ ನೀಡಿದ್ದ.
ಶಿಶಿರ್ ಕೂಡ ಅಪರಾಧ ಹಿನ್ನೆಲೆಯ ವ್ಯಕ್ತಿಯಾಗಿದ್ದು ಬಂದರು, ಕಾವೂರು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಎದುರಿಸುತ್ತಿದ್ದ. ಮೂಲತಃ ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿಯಾಗಿದ್ದ ಶಿಶಿರ್ ತನ್ನ ಅಪರಾಧ ಚಟುವಟಿಕೆ ಕಾರಣದಿಂದ ಮನೆಯವರಿಂದ ದೂರವಾಗಿದ್ದ. ಆನಂತರ, ಮಂಗಳೂರಿಗೆ ಬಂದು ಇಲ್ಲಿ ಒಬ್ಬಂಟಿಯಾಗೇ ನೆಲೆಸಿದ್ದ. ಇದೀಗ ಖಚಿತ ಮಾಹಿತಿ ಆಧರಿಸಿ ಪಿಸ್ತೂಲ್ ಹೊಂದಿದ್ದ ಕಾರಣಕ್ಕೆ ಶಿಶಿರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Old Accused arrested with unlicensed Gun at Kadri by Kadri Police in Mangalore. The arrested has been identified as Shishir. The gun that he was using was said to be of Andrew Rodrigues who was a murder accused. When Andrew was taken to the court the gun was handed over to Shishir.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am