ಬ್ರೇಕಿಂಗ್ ನ್ಯೂಸ್
14-04-23 10:19 pm Mangalore Correspondent ಕ್ರೈಂ
ಮಂಗಳೂರು, ಎ.14 : ನಗರದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಗೋರಿಗುಡ್ಡೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂಲತಃ ಬೀದರ್ ನಿವಾಸಿ ಪ್ರಜ್ವಲ್ ಫಿನೆಹೌಸ್ (26), ಕುಲಶೇಖರದಲ್ಲಿ ವಾಸಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿ, ಸಕಲೇಶಪುರ ಬೈಕರಪಳ್ಳಿ ನಿವಾಸಿ ಧ್ರುವ ಶೆಟ್ಟಿ (19) ಮತ್ತು ಕುಳಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿವಾನಿ (22) ಬಂಧಿತ ಆರೋಪಿಗಳು. ಆರೋಪಿಗಳಿಂದ 1.40 ಲಕ್ಷ ರೂ. ಮೌಲ್ಯದ 5.4 ಕಿಲೋ ಗಾಂಜಾ, 4 ಮೊಬೈಲ್, 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಠಾಣೆಯ ಪಿಎಸ್ಐ ಶೀತಲ್ ಅವರಿಗೆ ಬಂದ ಮಾಹಿತಿಯಂತೆ ಆರೋಪಿ ಪ್ರಜ್ವಲ್ ಫಿನೆಹೌಸ್ ನನ್ನು ದಸ್ತಗಿರಿ ಮಾಡಿದ್ದು ಆತನ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಮಹಾರಾಷ್ಟ್ರದಿಂದ ಗಾಂಜಾವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಹಾಗೂ ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಪ್ರಜ್ವಲ್ ವಿರುದ್ದ 2021ರಲ್ಲಿ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The south station police and the CCB unit conducted a joint operation resulting in the arrest of three ganja peddlers, including a girl who is a medical student.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm