ಬ್ರೇಕಿಂಗ್ ನ್ಯೂಸ್
16-04-23 02:00 pm HK News Desk ಕ್ರೈಂ
ಲಕ್ನೋ, ಎ.16 : ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್ಸ್ಟರ್ ಮತ್ತು ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ ಗುಂಡೇಟಿಗೆ ಬಲಿಯಾಗಿದ್ದಾನೆ. ಪೊಲೀಸ್ ಭದ್ರತೆಯಲ್ಲಿ ಸೋದರ ಅಶ್ರಫ್ ಅಹ್ಮದ್ ಜೊತೆಗೆ ಅತೀಕ್ ಅಹ್ಮದ್ ಮಾಧ್ಯಮದ ಜೊತೆಗೆ ಮಾತನಾಡುತ್ತಿದ್ದಾಗಲೇ ಮಾಧ್ಯಮದ ಸೋಗಿನಲ್ಲಿ ಹತ್ತಿರ ಬಂದಿದ್ದ ಆಗಂತುಕರು ತಲೆಗೆ ಗುರಿಯಿಟ್ಟು ಗುಂಡು ಹಾರಿಸಿದ್ದಾರೆ.
ಇಬ್ಬರನ್ನು ಬಂಧಿಸಿ ಪೊಲೀಸರು ವೈದ್ಯಕೀಯ ಚಿಕಿತ್ಸೆಗಾಗಿ ಆರೋಪಿಗಳನ್ನು ಪ್ರಯಾಗರಾಜ್ಗೆ ಕರೆದೊಯ್ಯುತ್ತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ. ಕಳೆದ ಫೆಬ್ರವರಿಯಲ್ಲಿ ಝಾನ್ಸಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಅತೀಕ್ ಅಹ್ಮದ್ ಮಗ ಅಸದ್ ಅಹ್ಮದ್ನನ್ನು ಮೊನ್ನೆಯಷ್ಟೇ ಹತ್ಯೆ ಮಾಡಲಾಗಿತ್ತು. ಒಂದು ದಿನದ ನಂತರದಲ್ಲಿ ಅತೀಕ್ ಅಹ್ಮದ್ ಹಾಗೂ ಅಶ್ರಫ್ ಅಹ್ಮದ್ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತೀವ್ರ ಸುದ್ದಿ ಮಾಡಿದ್ದ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇವರಿಬ್ಬರು ಆರೋಪಿಗಳಾಗಿದ್ದರು.
ಪೊಲೀಸರ ಎದುರಲ್ಲೇ ಹತ್ಯೆ
ಪ್ರಯಾಗರಾಜ್ ನಗರದಲ್ಲಿರುವ ವೈದ್ಯಕೀಯ ಕಾಲೇಜು ಬಳಿ ಗುಂಡಿನ ದಾಳಿ ನಡೆದಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮದ ವ್ಯಕ್ತಿಗಳು ಅಡ್ಡಗಟ್ಟಿದ್ದಾರೆ. ಈ ವೇಳೆ, ಪೊಲೀಸರ ಸರ್ಪಗಾವಲು ಇದ್ದಂತೆಯೇ ಅತೀಕ್ ಅಹ್ಮದ್ ಮಾಧ್ಯಮಕ್ಕೆ ಹೇಳಿಕೆ ನೀಡತೊಡಗಿದ್ದ. ಮಾಧ್ಯಮದ ಮಂದಿ ಸುತ್ತುವರಿದಿರುವಾಗಲೇ ಮೂವರು ಬೈಕಿನಲ್ಲಿ ಬಂದು ಗುಂಪಿನೊಳಗೆ ನುಸುಳಿದ್ದು ಹಿಂಬದಿಯಿಂದ ಇಬ್ಬರ ತಲೆಗೆ ಗುರಿಯಿಟ್ಟು ಶೂಟ್ ಮಾಡಿದ್ದಾರೆ. ಒಂದ್ಕಡೆ ಅತೀಕ್ ಅಹ್ಮದ್ ಹಾಗೂ ಸಹೋದರ ಅಶ್ರಫ್ ಅಹ್ಮದ್ ಮುಂದೆ ಮೈಕ್ ಹಿಡಿದು ಮಾಧ್ಯಮದವರು, ಪ್ರಶ್ನೆ ಕೇಳುತ್ತಿದ್ದರು. ಅವರನ್ನು ಪೊಲೀಸರು ಸುತ್ತುವರೆದಿದ್ದಾಗಲೇ ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಸನ್ನಿ, ಲವ್ಲೇಶ್ ಮತ್ತು ಅರುಣ್ ಎಂಬವರನ್ನು ಬಂಧಿಸಲಾಗಿದೆ.
ಅತೀಕ್ ಅಹ್ಮದ್ ಯಾರು?
ಆಗಸ್ಟ್ 10, 1962 ರಂದು ಜನಿಸಿದ್ದ ಅತೀಕ್ ಅಹ್ಮದ್ ಸಮಾಜವಾದಿ ಪಕ್ಷದ ಮಾಜಿ ಶಾಸಕ ಮತ್ತು ಸಂಸದನಾಗಿದ್ದ. ರಾಜಕೀಯಕ್ಕೆ ಬರುವ ಮುನ್ನ ಗ್ಯಾಂಗ್ಸ್ಟರ್ ಆಗಿ ಗುರುತಿಸಿಕೊಂಡಿದ್ದ. ಅತೀಕ್ ಅಹ್ಮದ್ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಸತತ ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ದಾಖಲೆ ಸೃಷ್ಟಿಸಿದ್ದ. ಜೊತೆಗೆ 2004 ರಿಂದ 2009ರ ವರೆಗೆ ಎಸ್ಪಿ ಪಕ್ಷದಿಂದಲೇ ಸಂಸದನಾಗಿದ್ದ.
ಮೂರೇ ತಿಂಗಳಿಗೆ ರಾಜು ಪಾಲ್ ಕೊಲೆ
ಅಲಹಾಬಾದ್ (ಪಶ್ಚಿಮ) ಈ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಆತೀಕ್, ಫುಲ್ಬಾರ್ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಅಲಹಾಬಾದ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಆತೀಕ್ ಅಹ್ಮದ್ ಸಹೋದರ ಅಶ್ರಫ್ ಸ್ಪರ್ಧಿಸಿದ್ದರು. ಆದರೆ ರಾಜು ಪಾಲ್ ತಮ್ಮ ಮೊದಲ ಚುನಾವಣೆಯಲ್ಲಿಯೇ ಅಶ್ರಫ್ ನನ್ನು ಸೋಲಿಸಿದ್ದರು. ಕ್ಷೇತ್ರದ ಶಾಸಕರಾಗಿ ಗೆಲುವು ಕಂಡ ಮೂರೇ ತಿಂಗಳಿಗೆ ರಾಜು ಪಾಲ್ ಕೊಲೆ ನಡೆದಿತ್ತು. ಅತೀಕ್ ಅಹ್ಮದ್ ಸೋದರರು ಸೇರಿ ಕೊಲೆ ನಡೆಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು
India: Ex Muslim MLA of Uttar Pradesh killed under police escort and Media presence by Hindi Gangsters. His Last words, My son Guddu was killed two days ago by police because he was a Muslim pic.twitter.com/5e0Q7Uf9wP #AtikAhmed #GudduMuslim
— South Asian Journal (@sajournal1) April 15, 2023
Atiq Ahmed, the Uttar Pradesh gangster who faced at least 100 criminal cases, and his brother Ashraf Ahmed were shot dead on camera while they were being taken for a medical check-up in Uttar Pradesh's Prayagraj last night.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am