ಬ್ರೇಕಿಂಗ್ ನ್ಯೂಸ್
26-10-20 07:34 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 26: ತುಳು ಚಿತ್ರನಟ, ಫೈನಾನ್ಸ್ ಮಾಡಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದೆ. ಕೊಲೆಯಾದ ದಿವಸ ಆತ ಉಳಿದುಕೊಂಡಿದ್ದ ಭಂಡಾರಿಬೆಟ್ಟಿನ ಫ್ಲ್ಯಾಟ್ ನಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಅಲ್ಲದೆ, ಸುರೇಂದ್ರನ ಮೈಯಲ್ಲಿ ಒಂದು ಕೇಜಿಯಷ್ಟು ಬಂಗಾರ ಇತ್ತು. ಕೊಲೆಯ ಬಳಿಕ ಹಣ ಮತ್ತು ಬಂಗಾರ ನಾಪತ್ತೆಯಾಗಿದ್ದು ಕೊಲೆ ಆರೋಪಿಗಳೇ ಕದ್ದಿರಬೇಕೆಂದು ಶಂಕಿಸಿ ಸುರೇಂದ್ರ ಬಂಟ್ವಾಳ್ ತಾಯಿ ರಾಧಾ ಮತ್ತು ತಮ್ಮ ಚಂದ್ರಹಾಸ್ ಎಸ್ಪಿಗೆ ದೂರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಎಫ್ಐಆರ್ ನಲ್ಲಿ ನಗದು ಮತ್ತು ಬಂಗಾರ ನಾಪತ್ತೆಯಾಗಿರುವ ವಿಚಾರವನ್ನು ಸೇರಿಸಿಲ್ಲ. ಈ ಬಗ್ಗೆ ಪೊಲೀಸರಿಗೆ ನಾವು ಮನವಿ ಮಾಡಿದ್ದರೂ, ಎಫ್ಐಆರ್ ನಲ್ಲಿ ಸೇರಿಸಿಕೊಂಡಿಲ್ಲ. ಇದರ ಬಗ್ಗೆ ಎಸ್ಪಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾಗಿ ಸುರೇಂದ್ರನ ತಾಯಿ ರಾಧಾ ತಿಳಿಸಿದ್ದಾರೆ.
ಅಲ್ಲದೆ, ಸತೀಶ್ ಕುಲಾಲ್ ಒಬ್ಬನೇ ಈ ಕೃತ್ಯ ಮಾಡಿಲ್ಲ. ಇದರ ಹಿಂದೆ ಪ್ರಭಾವಿಗಳು ಬಹಳಷ್ಟು ಮಂದಿ ಇದ್ದಾರೆ. ಕೊಲೆಯ ಬಳಿಕ ಚಿನ್ನ ಮತ್ತು ನಗದನ್ನು ಕದ್ದುಕೊಂಡು ಹೋಗಿದ್ದಾರೆ. ಫ್ಲ್ಯಾಟಿನಲ್ಲಿ ಒಂದು ಕೋಟಿ ನಗದು ಇದ್ದ ಬಗ್ಗೆ ಕೊಲೆಯಾಗುವ ಮೂರು ದಿನ ಮೊದಲು ನನ್ನಲ್ಲಿ ಹೇಳಿಕೊಂಡಿದ್ದ. ಹಣ ಮತ್ತು ಚಿನ್ನಕ್ಕಾಗಿ ಈ ಕೊಲೆ ನಡೆದಿದ್ದಾಗಿ ಅನಿಸುತ್ತಿದೆ ಎಂದು ರಾಧಾ ಹೇಳಿದ್ದಾರೆ.

ಈ ಬಗ್ಗೆ ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಅವರನ್ನು ಸಂಪರ್ಕಿಸಿದಾಗ, ಹಣ ಮತ್ತು ಬಂಗಾರದ ಬಗ್ಗೆ ಆರಂಭದಲ್ಲಿ ದೂರು ನೀಡುವಾಗ ಹೇಳಿರಲಿಲ್ಲ. ಹಾಗಾಗಿ ಎಫ್ಐಆರ್ ನಲ್ಲಿ ಸೇರಿಸಿಕೊಂಡಿರಲಿಲ್ಲ. ಈಗ ಪ್ರಕರಣದ ತನಿಖೆ ಮುಂದುವರಿದಿದ್ದು, ಅಗತ್ಯ ಬಿದ್ದಲ್ಲಿ ಸೇರಿಸಿಕೊಳ್ಳುತ್ತೇವೆ. ಸದ್ಯದಲ್ಲೇ ಪ್ರಕರಣದ ವಿವರವನ್ನು ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಬಂಟ್ವಾಳ ಪೊಲೀಸರಿಂದ ಸಿಕ್ಕ ಮಾಹಿತಿ ಪ್ರಕಾರ, ಹಣ, ಬಂಗಾರ ಏನೆಲ್ಲಾ ಸಿಕ್ಕಿತ್ತು, ಎಲ್ಲವನ್ನೂ ಕೋರ್ಟಿಗೆ ಒಪ್ಪಿಸಲಿದ್ದೇವೆ. ಅದರಲ್ಲಿ ಎಷ್ಟಿತ್ತು. ಎಷ್ಟು ಬಂಗಾರ ಇತ್ತು ಎನ್ನೋದು ನಮಗೆ ಗೊತ್ತಿಲ್ಲ. ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದೇವೆ. ಹಲವು ವಿಚಾರಗಳು ಹೊರಬಂದಿವೆ. ಐದಾರು ತಂಡಗಳು ಸೇರಿ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಕೊಲೆಗೆ ಯಾರು ಬೆಂಬಲ ಕೊಟ್ಟಿದ್ದರು. ಯಾರಾದ್ರೂ ಸುಪಾರಿ ಕೊಟ್ಟಿದ್ದರೇ ಇವೆಲ್ಲ ವಿಚಾರದ ಬಗ್ಗೆ ಆರೋಪಿಗಳ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.
Radha, mother of Surendra Bantea and brother Chandrahas have alleged that Surendra had one crore rupees cash in the Bhandaribettu flat and he had about a kilogram of gold ornaments on his body which are missing and that he was eliminated with an eye on these things.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am