ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm