ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm