ಬ್ರೇಕಿಂಗ್ ನ್ಯೂಸ್
04-05-23 08:59 pm HK News Desk ಕ್ರೈಂ
ಮೀರತ್, ಮೇ 4: ಉತ್ತರ ಪ್ರದೇಶದ ಪೊಲೀಸರು ಮತ್ತೊಬ್ಬ ಗ್ಯಾಂಗ್ಸ್ಟರ್ನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ರಾಜಕಾರಣಿ, ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ನ ಮಗ ಅಸಾದ್ ಅಹ್ಮದ್ ಹಾಗೂ ಆತನ ಸಹಚರ ಗುಲಾಂ ಮೊಹಮ್ಮದ್ನನ್ನು ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ಪೊಲೀಸರು ಗುಂಡಿನ ಚಕಮಕಿಯಲ್ಲಿ ಕೊಂದ ಕೆಲವೇ ದಿನಗಳಲ್ಲಿ ಈ ಎನ್ಕೌಂಟರ್ ನಡೆದಿದೆ.
ಮೀರತ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದ ಎನ್ಕೌಂಟರ್ನಲ್ಲಿ ಕುಖ್ಯಾತ ಗ್ಯಾಂಗ್ಸ್ಟರ್ ಅನಿಲ್ ದುಜಾನಾ ಎಂಬಾತನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಅನಿಲ ದುಜಾನಾ, ಗೌತಮ ಬುದ್ಧ ನಗರ ಜಿಲ್ಲೆಯ ಬಾದಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಎಂಬ ಗ್ರಾಮದ ನಿವಾಸಿಯಾಗಿದ್ದಾನೆ. ಈತ ನೈಜ ಹೆಸರು ಅನಿಲ್ ನಗರ್.
ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ತನ್ನ ಹವಾ ಇಟ್ಟುಕೊಂಡಿದ್ದ ಅನಿಲ್, ಜನರಲ್ಲಿ ಭೀತಿ ಮೂಡಿಸಿದ್ದ. ಈತ ತನ್ನದೇ ಸಂಘಟಿತ ಕ್ರಿಮಿನಲ್ ಗ್ಯಾಂಗ್ ನಡೆಸುತ್ತಿದ್ದ. ಹತ್ಯೆಯಾದ ಗ್ಯಾಂಗ್ಸ್ಟರ್ ಮೇಲೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ 18 ಕೊಲೆ, ಸುಲಿಗೆ, ದರೋಡೆ, ಭೂ ಕಬಳಿಕೆ ಮತ್ತು ತೆರವು ಪ್ರಕರಣಗಳು ಸೇರಿವೆ.
ಮಯೂರ ವಿಹಾರ ಪ್ರದೇಶದಲ್ಲಿ ದಿಲ್ಲಿ ಪೊಲೀಸರು 2022ರ ಡಿಸೆಂಬರ್ನಲ್ಲಿ ಅನಿಲ್ ದುಜಾನಾನನ್ನು ಬಂಧಿಸದ್ದರು. ಬಳಿಕ ಆತ ಜೈಲಿನಿಂದ ಹೊರಬಂದಿದ್ದ. ದುಜಾನಾ ಬಗ್ಗೆ ಸುಳಿವು ನೀಡಿದವರಿಗೆ ನೋಯ್ಡಾ ಪೊಲೀಸರು 50 ಸಾವಿರ ರೂ ಬಹುಮಾನ ಘೋಷಿಸಿದ್ದರೆ, ಬುಲಂದಶಹರ್ ಪೊಲೀಸರು 25 ಸಾವಿರ ರೂ ಬಹುಮಾನ ಪ್ರಕಟಿಸಿದ್ದರು. ಆತ 2012ರಿಂದಲೂ ಜೈಲಿನಲ್ಲಿದ್ದ. ಆದರೆ 2021ರಲ್ಲಿ ಆತನಿಗೆ ಜಾಮೀನು ದೊರಕಿತ್ತು. ನಂತರ ಹಳೆಯ ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಆತನ ವಿರುದ್ಧ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಜೈಲಿನಿಂದಲೇ ಮಾಫಿಯಾ ನಿರ್ವಹಣೆ ;
2012ರಲ್ಲಿ ತ್ರಿವಳಿ ಕೊಲೆ ಪ್ರಕರಣದಲ್ಲಿ ಸೆರೆಸಿಕ್ಕ ನಂತರ ಅನಿಲ್ ದುಜಾನಾ, ಇನ್ನಿಬ್ಬರು ಕ್ರಿಮಿನಲ್ಗಳಾದ ರಣದೀಪ್ ಭಾಟಿ ಮತ್ತು ಅಮಿತ್ ಕಾಸನಾ ಸಹಾಯದೊಂದಿಗೆ ಜೈಲಿನ ಒಳಗಿನಿಂದಲೇ ತನ್ನ ಕ್ರಿಮಿನಲ್ ಸಾಮ್ರಾಜ್ಯವನ್ನು ನಡೆಸುತ್ತಿದ್ದ. ಜೈಲಿನಲ್ಲಿ ಕುಳಿತುಕೊಂಡೇ ಆತ ತನ್ನ ಸಹಚರರ ನೆರವಿನಿಂದ ಕೊಲೆ, ಸುಲಿಗೆ ಮತ್ತು ಇತರೆ ಕ್ರಿಮಿನಲ್ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದ.

ದುಜಾನಾ Vs ಭಾಟಿ ಗ್ಯಾಂಗ್ ವೈಷಮ್ಯ;
ದುಜಾನಾ ಕುಟುಂಬ ಹಾಗೂ ಸುಂದರ್ ಭಾಟಿ ಗ್ಯಾಂಗ್ ನಡುವೆ ಬಹಳ ದೀರ್ಘಕಾಲದ ವೈಷಮ್ಯ ಇತ್ತು. 2012ರಲ್ಲಿ ದುಜಾನಾ ಮತ್ತು ಆತನ ಗ್ಯಾಂಗ್, ಸುಂದರ್ ಭಾಟಿ ಹಾಗೂ ಆತನ ನಿಕಟವರ್ತಿಗಳ ಮೇಲೆ ಎಕೆ- 47 ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದ. ಸರ್ಕಾರಿ ಗುತ್ತಿಗೆಗಳನ್ನು ಪಡೆದುಕೊಳ್ಳುವುದು, ಕಬ್ಬಿಣದ ಕಂಬಿಗಳನ್ನು ಕದಿಯುವುದು ಮತ್ತು ಟೋಲ್ ಪ್ಲಾಜಾ ಗುತ್ತಿಗೆಗಳ ವಿಚಾರದಲ್ಲಿ ಈ ಎರಡೂ ಗ್ಯಾಂಗ್ಗಳು ಅನೇಕ ಬಾರಿ ಮುಖಾಮುಖಿಯಾಗಿದ್ದವು. ಭಾಟಿ ಗ್ಯಾಂಗ್ನಿಂದ ಬೆದರಿಕೆ ಇದ್ದ ಕಾರಣಕ್ಕೆ ಪೊಲೀಸರು ತಮ್ಮ ವಶದಲ್ಲಿದ್ದಾಗ ದುಜಾನಾನನ್ನು ಬುಲೆಟ್ ಪ್ರೂಫ್ ಜಾಕೆಟ್ ತೊಡಿಸಿ ಕರೆದೊಯ್ಯುತ್ತಿದ್ದರು.
ಉತ್ತರ ಪ್ರದೇಶದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿ ದುಜಾನಾ ಕೂಡ ಸೇರಿದ್ದ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಐಎ), ಗೂಂಡಾ ಕಾಯ್ದೆ ಸೇರಿದಂತೆ ಅನೇಕ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು.
Gangster Anil Dujana, 36, has been killed in an encounter with a team of Uttar Pradesh Police's Special Task Force (STF) in Meerut. "Anil Dujana, a wanted criminal, was surrounded by our team in a village in Meerut on Thursday afternoon. Dujana fired at our team to escape and was killed in retaliatory firing," Amitabh Yash, the STF's Additional Director-General, said,
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm