ಬ್ರೇಕಿಂಗ್ ನ್ಯೂಸ್
28-10-20 11:55 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28: ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ನಡೆದು ನವ ದಂಪತಿ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಇಂದು ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಸ್ತೆ ಕಾಮಗಾರಿ ನಡೆಸಿದ ನವಯುಗ ಕನ್ ಸ್ಟ್ರಕ್ಷನ್ ಸಂಸ್ಥೆಯ ಅಧಿಕಾರಿಗಳು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಕಮಿಷನರ್ ವಿಕಾಸ್ ಕುಮಾರ್ ಸ್ಥಳದ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಆಗುತ್ತಿರುವುದಕ್ಕೇನು ಕಾರಣ ಎಂಬ ಬಗ್ಗೆ ಹೈವೇ ಅಥಾರಿಟಿ ಮತ್ತು ಟ್ರಾಫಿಕ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಓವರ್ ಬ್ರಿಡ್ಜ್ ಕೊನೆಯಲ್ಲಿ ಪಾಸಿಂಗ್ ಕೊಟ್ಟಿರುವುದು ಅಪಾಯಕಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುವ ಭಾಗದಲ್ಲಿ ಹೀಗೆ ಪಾಸಿಂಗ್ ವ್ಯವಸ್ಥೆ ಕೊಡಬಾರದು. ಹೆದ್ದಾರಿಯಲ್ಲಿ ವಾಹನಗಳಿಗೆ ನೇರವಾಗಿ ಸಾಗಲು ವ್ಯವಸ್ಥೆ ಇರಬೇಕೆಂದು ತೀರ್ಮಾನಕ್ಕೆ ಬಂದಿದ್ದೇವೆ. ಜೊತೆಗೆ, ಈ ಭಾಗದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಉಳ್ಳಾಲಕ್ಕೆ ತೆರಳಲು ಬೇರೆ ಸರ್ವಿಸ್ ರೋಡ್ ಬಳಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಏನೆಲ್ಲಾ ಪರ್ಯಾಯ ಕ್ರಮ ಕೈಗೊಳ್ಳಬಹುದು ಅದನ್ನು ಮಾಡುತ್ತೇವೆ. ಅಪಘಾತ ವಲಯ ಆಗುವುದನ್ನು ತಪ್ಪಿಸುತ್ತೇವೆ ಎಂದು ಹೇಳಿದರು.
ಸೋಮವಾರ ಸಂಜೆ ಓವರ್ ಬ್ರಿಡ್ಜ್ ಕೊನೆಯಲ್ಲಿ ಬೈಕಿನಲ್ಲಿ ದಂಪತಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದಾಗ, ಹೆದ್ದಾರಿಯಲ್ಲಿ ಬಂದಿದ್ದ ಟ್ರಕ್ ಬೈಕ್ ಮೇಲಿನಿಂದಲೇ ಹರಿದು ಹೋಗಿ ಭೀಕರ ಅಪಘಾತ ಆಗಿತ್ತು. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಕೆಯ ಪತಿ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಪ್ರಾಣ ಕಳಕೊಂಡಿದ್ದರು. ಅಪಘಾತ ಘಟನೆಗೆ ಇಲ್ಲಿನ ಅವೈಜ್ಞಾನಿಕ ರಸ್ತೆ ತಿರುವು ಕಾರಣ. ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಸೂಕ್ತ ಮಾನದಂಡ ಪಾಲಿಸದ ಕಾರಣ ಪದೇ ಪದೇ ಅಪಘಾತಗಳಾಗುತ್ತಿವೆ ಎಂದು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
City police commissioner Vikas Kumar on Wednesday, visited the spot at Thokkottu where newly married couple Rayan and Priya was killed in a tragic accident on October 27.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm