ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm