ಬ್ರೇಕಿಂಗ್ ನ್ಯೂಸ್
11-05-23 01:22 pm HK News Desk ಕ್ರೈಂ
ಕೊಲ್ಲಂ, ಮೇ 11: ತನಗೆ ಚಿಕಿತ್ಸೆ ನೀಡುತ್ತಿದ್ದ ಮಹಿಳಾ ವೈದ್ಯರನ್ನು ವ್ಯಕ್ತಿಯೊಬ್ಬ ಇರಿದು ಕೊಂದ ಭಯಾನಕ ಘಟನೆ ಕೇರಳದಲ್ಲಿ ನಡೆದಿದೆ. ಕೊಲ್ಲಂ ಜಿಲ್ಲೆಯ ಕೊಟ್ಟರಕ್ಕಾರದಲ್ಲಿನ ತಾಲೂಕು ಆಸ್ಪತ್ರೆಯಲ್ಲಿ 22 ವರ್ಷದ ವೈದ್ಯೆಯನ್ನು ಕುಡುಕ ರೋಗಿಯೊಬ್ಬ ಬುಧವಾರ ಕೊಲೆ ಮಾಡಿದ್ದಾನೆ. ಈ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಜತೆ ಕಿತ್ತಾಡಿಕೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಕೇರಳದ ವೈದ್ಯಕೀಯ ವೃತ್ತಿಪರರಲ್ಲಿ ಆಕ್ರೋಶ ಉಂಟುಮಾಡಿದೆ. ಕೊಟ್ಟರಕ್ಕಾರದಲ್ಲಿ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬುಧವಾರ ಮುಂಜಾನೆ ಈ ಭಯಾನಕ ಘಟನೆ ನಡೆದಿದ್ದು, ಸಾವಿಗೀಡಾದ ವೈದ್ಯೆಯನ್ನು ವಂದನಾ ದಾಸ್ ಎಂದು ಗುರುತಿಸಲಾಗಿದೆ. ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಾಸ್ ಅವರು, ಕೆಲವು ಗಂಟೆಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
/newsdrum-in/media/media_files/1tvlhYpnAIJx3hBByEw3.jpg)
ದಾಳಿ ನಡೆಸಿದ ಕುಡುಕ, 42 ವರ್ಷದ ಸಂದೀಪ್, ಕುಟುಂಬದ ಸದಸ್ಯರ ಜತೆ ಜಗಳವಾಡುತ್ತಿದ್ದ. ಈ ವೇಳೆ ಆತನ ಕಾಲಿಗೆ ಗಾಯವಾಗಿತ್ತು. ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಸಂದೀಪ್ಗೆ ವಂದನಾ ದಾಸ್ ಅವರು ಬ್ಯಾಂಡೇಜ್ ಸುತ್ತುತ್ತಿದ್ದರು. ಇದ್ದಕ್ಕಿದ್ದಂತೆ ಕೆರಳಿದ ಆತ ಕತ್ತರಿ ಮತ್ತು ಚಿಕ್ಕ ಚಾಕು ತೆಗೆದುಕೊಂಡು ಅಲ್ಲಿ ನಿಂತಿದ್ದ ಎಲ್ಲರ ಮೇಲೆಯೂ ದಾಳಿ ನಡೆಸಿದ್ದಾನೆ.
ದಿಢೀರ್ ದಾಳಿಯಿಂದ ಯುವ ವೈದ್ಯೆಗೆ ಗಂಭೀರ ಗಾಯವಾಯಿತು. ಆಕೆಯ ಪಕ್ಕದಲ್ಲಿ ಇದ್ದ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆಯ ಜೀವ ಉಳಿಸುವುದು ಸಾಧ್ಯವಾಗಿಲ್ಲ.

ಹಲ್ಲೆಕೋರ ಸಂದೀಪ್ ಪುಯಪಳ್ಳಿ ಚೆರುಕಾರಕೋಣಂನ ನಿವಾಸಿಯಾಗಿದ್ದು, ವೃತ್ತಿಯಿಂದ ಶಿಕ್ಷಕನಾಗಿದ್ದ ಆತನನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿತ್ತು. ಕುಟುಂಬದ ಸದಸ್ಯರ ಜತೆ ಜಗಳವಾಡಿದ್ದ ಸಂದೀಪ್, ತನ್ನನ್ನು ಕಾಪಾಡುವಂತೆ ಸ್ವತಃ ತಾನೇ ಪೊಲೀಸರಿಗೆ ಕರೆ ಮಾಡಿದ್ದ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಆತನ ಕಾಲಿಗೆ ಗಾಯವಾಗಿರುವುದು ಕಂಡುಬಂದಿತ್ತು. ಆತನನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಆತ ಮದ್ಯ ಸೇವನೆ ಮಾಡಿದ್ದ. ಆಸ್ಪತ್ರೆಗೆ ಕರೆ ತರುವಾಗ ಉದ್ರಿಕ್ತನಾಗಿ ವರ್ತಿಸುತ್ತಿದ್ದ. ರೋಗಿಯ ಗಾಯಕ್ಕೆ ಚಿಕಿತ್ಸೆ ನೀಡುವಾಗ ಕೊಠಡಿ ಒಳಗೆ ನಮಗೆ ಪ್ರವೇಶ ಇಲ್ಲದ ಕಾರಣ, ಆತನ ಜತೆ ವೈದ್ಯೆ ಮಾತ್ರ ಇದ್ದರು" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಇದ್ದಕ್ಕಿದ್ದಂತೆ ಅಲ್ಲಿ ಗದ್ದಲ ಶುರುವಾಗಿತ್ತು. ವೈದ್ಯೆಯು ಸಹಾಯಕ್ಕಾಗಿ ಕಿರುಚುತ್ತಾ ಹೊರಗೆ ಓಡಿ ಬಂದರು. ಕತ್ತರಿ ಮತ್ತು ಚೂರಿ ಹಿಡಿದ
ಪೊಲೀಸ್ ಸಿಬ್ಬಂದಿ ಆತನನ್ನು ತಡೆಯಲು ಪ್ರಯತ್ನಿಸಿದಾಗ ಅವರ ಮೇಲೆ ಕೂಡ ದಾಳಿ ನಡೆಸಿದ್ದಾನೆ. ವೈದ್ಯೆ ಅಲ್ಲದೆ, ಇನ್ನೂ ನಾಲ್ಕು ಜನರಿಗೆ ಗಾಯಗಳಾಗಿವೆ. ಕುಡಿದ ಮತ್ತಿನಲ್ಲಿದ್ದ ಆತ ಆಸ್ಪತ್ರೆಯ ಅನೇಕ ಕಡೆ ದಾಂದಲೆ ನಡೆಸಿದ್ದಾನೆ. ಆತನನ್ನು ಬಹಳ ಕಷ್ಟಪಟ್ಟು ಹಿಡಿದು, ವಶಕ್ಕೆ ಪಡೆದುಕೊಳ್ಳಲಾಗಿದೆ.
A 23-year-old doctor was stabbed to death on Wednesday at a hospital in Kottarakkara area of Kollam district in Kerala allegedly by a man, a school teacher under suspension, who was brought there by police after being involved in a fight with his family members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm