ಬ್ರೇಕಿಂಗ್ ನ್ಯೂಸ್
16-05-23 11:32 am HK News Desk ಕ್ರೈಂ
ಕೋಲಾರ, ಮೇ 16: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.


ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Political violence broke out on Saturday night, leading to the murder of a BJP worker in D Settihalli, under Nandagudi police limits in Hoskote. The incident came to light on Sunday afternoon. Police registered a case against four Congress workers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm