ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm