ಬ್ರೇಕಿಂಗ್ ನ್ಯೂಸ್
29-05-23 09:34 pm HK News Desk ಕ್ರೈಂ
ನವದೆಹಲಿ, ಮೇ 29: 16 ವರ್ಷದ ತರುಣಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ 34 ಬಾರಿ ಚುಚ್ಚಿ ಚುಚ್ಚಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ದಾರಿಹೋಕರು ನಡೆದು ಹೋಗುತ್ತಿದ್ದಂತೆಯೇ ಕಟುಕ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ.
ದೆಹಲಿಯ ಶಹಬಾದ್ ಡೈರಿ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ಜನರು ನಡೆದು ಹೋಗುವ ಕಾಲುದಾರಿಯಲ್ಲೇ ಯುವಕ ಚಾಕುವಿನಲ್ಲಿ ಚುಚ್ಚಿ ಚುಚ್ಚಿ ಕೃತ್ಯ ಎಸಗಿದ್ದಾನೆ. ಸಾಕ್ಷಿ ಎಂಬ 16 ವರ್ಷದ ಯುವತಿಯನ್ನು ಸಾಹಿಲ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇವರಿಬ್ಬರು ಪ್ರೀತಿಸುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವೈಮನಸ್ಸು ಉಂಟಾಗಿತ್ತು. ನಿನ್ನೆ ಸಂಜೆ ಶಹಬಾದ್ ಡೈರಿ ಪ್ರದೇಶದಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಎದುರುಗೊಂಡ ಯುವಕ, ನೇರವಾಗಿ ಚಾಕುವಿನಲ್ಲಿ ತಿವಿದು ಹಾಕಿದ್ದಾನೆ. ಆನಂತರ, ಕಲ್ಲನ್ನು ತಲೆಗೆ ಎತ್ತಿ ಹಾಕಿ, ಕಾಲಿನಲ್ಲಿ ತುಳಿದು ಅತ್ಯಂತ ಪೈಶಾಚಿಕವಾಗಿ ಕೊಂದು ಹಾಕಿದ್ದಾನೆ. ಎಲ್ಲರೂ ನೋಡ ನೋಡುತ್ತಲೇ ಕೃತ್ಯ ನಡೆದಿದ್ದು, ಬಳಿಕ ಯುವಕ ಅಲ್ಲಿಂದ ಹಿಂತಿರುಗಿದ್ದಾನೆ.

ಪೊಲೀಸರ ಪ್ರಕಾರ, ಯುವತಿ ಆಕೆಯ ಗೆಳತಿಯ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆಂದು ಹೊರಟಿದ್ದಳು. ಯುವಕ ಹಿಂಬಾಲಿಸುತ್ತಾ ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆರೋಪಿ ಸಾಹಿಲ್ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಬಳಿಕ ಉತ್ತರ ಪ್ರದೇಶದ ಬುಲಂದ್ ಶಹರ್ ಎಂಬಲ್ಲಿಂದ ಪತ್ತೆ ಮಾಡಿದ್ದಾರೆ.
ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಘಾತ ವ್ಯಕ್ತಪಡಿಸಿದ್ದು, ಜನರು ನೋಡ ನೋಡುತ್ತಿರುವಾಗಲೇ ಈ ರೀತಿ ಕೃತ್ಯ ನಡೆದಿರುವುದು ಆಘಾತಕಾರಿ. ಹಂತಕರಿಗೆ ಪೊಲೀಸರ ಭಯ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಗವರ್ನರ್ ಜವಾಬ್ದಾರಿ. ಜನರ ಸುರಕ್ಷತೆಗಾಗಿ ಕೂಡಲೇ ಏನಾದರೂ ವ್ಯವಸ್ಥೆ ಮಾಡಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು 35 ತುಂಡುಗಳನ್ನಾಗಿ ಕತ್ತರಿಸಿ ಎಸೆದು ಬಂದಿದ್ದ ಕೃತ್ಯ ಬೆಳಕಿಗೆ ಬಂದಿತ್ತು.
A 16-year-old girl was murdered - allegedly by her boyfriend, a 20-year-old man - in Delhi on Sunday, police in the national capital said this morning. The accused - identified as Sahil - was arrested from Bulandshahr in Uttar Pradesh hours after the gruesome crime. Preliminary findings from the postmortem indicate the girl was stabbed 34 times and her skull ruptured after it was bashed in by a blunt object. The detailed report has yet to be released.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm