ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm