ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm