ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm