ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm