ಬ್ರೇಕಿಂಗ್ ನ್ಯೂಸ್
10-06-23 02:12 pm HK News Desk ಕ್ರೈಂ
ಪ್ರಯಾಗ್ರಾಜ್, ಜೂ.10: ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ನಲ್ಲಿ ಬಚ್ಚಿಟ್ಟ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪಾತಕಿಯೊಬ್ಬನನ್ನು ಬಂಧಿಸಲಾಗಿದೆ.
ಮೃತ ಮಹಿಳೆಯನ್ನು 35 ವರ್ಷದ ರಾಜ್ ಕೇಸರ್ ಎಂದು ಗುರುತಿಸಲಾಗಿದ್ದು, ಆಕೆಯ ದೇಹವನ್ನು ನೀರಿನ ಟ್ಯಾಂಕ್ನಿಂದ ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಮುನಾಪುರ ಕರ್ಛಾನಾ ಪೊಲೀಸ್ ಠಾಣೆ ಪ್ರದೇಶದಲ್ಲಿನ ಮಹೇವಾ ಎಂಬಲ್ಲಿ ಆರೋಪಿ ಅರವಿಂದ್ ನೆಲೆಸಿದ್ದ. ಅದೇ ಜಾಗದಲ್ಲಿ ರಾಜ್ ಕೇಸರ್ ಮೃತದೇಹ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ವಿಶ್ವಜೀತ್ ತಿಳಿಸಿದ್ದಾರೆ.
ರಾಜ್ ಕೇಸರ್ಳನ್ನು ಸುಮಾರು 14 ದಿನಗಳ ಹಿಂದೆ ಕೊಲೆ ಮಾಡಿದ್ದ ಅರವಿಂದ್, ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಒಳಗೆ ಅಡಗಿಸಿಟ್ಟಿದ್ದ. ಮಗಳು ಎಲ್ಲಿಯೂ ಕಾಣುತ್ತಿಲ್ಲ ಎಂದು ಮೇ 30ರಂದು ರಾಜ್ ಕೇಸರ್ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಮೃತ ರಾಜ್ ಕೇಸರ್ ನಡೆಸಿದ್ದ ಫೋನ್ ಸಂಭಾಷಣೆಗಳ ಆಧಾರದಲ್ಲಿ ಅರವಿಂದ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಘಟನೆ ಬಯಲಾಗಿದೆ. ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
A man allegedly killed his lover and hid her body in a tank at his under-construction house in Uttar Pradesh’s Prayagraj. The victim identified as 35-year-old Raj Kesar was recovered on Friday from the house of the accused, Arvind, in Mahewa locality under the Yamunapar Karchhana police station area here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm