ಬ್ರೇಕಿಂಗ್ ನ್ಯೂಸ್
31-10-20 01:50 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 31: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ಆಕಾಶಭವನ್ ಶರಣ್ ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶರಣ್ ಪೂಜಾರಿಯನ್ನು ವಿಚಾರಣೆ ನಡೆಸುವ ಸಲುವಾಗಿ ಪೊಲೀಸರು ಬಾಡಿ ವಾರೆಂಟ್ ಪಡೆದು ಬೆಂಗಳೂರಿಗೆ ತೆರಳಿದ್ದರು. ನಿನ್ನೆಯೇ ಆತನನ್ನು ಜೈಲಿನಿಂದ ಬಂಟ್ವಾಳಕ್ಕೆ ಕರೆ ತರಲಾಗಿದ್ದು ಬಂಟ್ವಾಳ ಜೆಎಂಎಫ್ ಕೋರ್ಟಿಗೆ ಹಾಜರುಪಡಿಸಿ ಐದು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈಗಾಗ್ಲೇ ಕೊಲೆ ಪ್ರಕರಣದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದು, ಅವರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಡುವೆ, ಆಕಾಶಭವನ್ ಶರಣ್ ಬಂಟ್ವಾಳ ನ್ಯಾಯಾಧೀಶರಿಗೆ ಬರೆದ ಪತ್ರ ಬಯಲಾಗಿತ್ತು. ತನ್ನನ್ನು ಬಂಟ್ವಾಳ ಪೊಲೀಸರ ವಶಕ್ಕೆ ಒಪ್ಪಿಸಿದರೆ ಎನ್ಕೌಂಟರ್ ನಡೆಸುತ್ತಾರೆಂದು ಆತಂಕ ವ್ಯಕ್ತಪಡಿಸಿ ಜೈಲಿನಿಂದ ಪತ್ರ ಬರೆದಿದ್ದ. ಆದರೆ, ರೌಡಿ ಬರೆದ ಪತ್ರಕ್ಕೆ ನ್ಯಾಯಾಧೀಶರು ಮನ್ನಣೆ ನೀಡಿಲ್ಲ ಎನ್ನಲಾಗುತ್ತಿದೆ. ಆಕಾಶಭವನ್ ಶರಣ್, ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಬಂಟನೆಂದೇ ಗುರುತಿಸ್ಕೊಂಡಿದ್ದು, ಹತ್ಯೆ ಪ್ರಕರಣದಲ್ಲಿ ವಿಕ್ಕಿ ಶೆಟ್ಟಿಯ ಪಾತ್ರ ಇದೆಯೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಈ ನಡುವೆ, ಬೆಳ್ತಂಗಡಿ ಮೂಲದ ಪ್ರತೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನೇ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ನನ್ನು ತನ್ನ ವಾಹನದಲ್ಲಿ ಕರೆದುಕೊಂಡು ಬಂದು ಪೊಲೀಸರಿಗೆ ಶರಣಾಗಿಸಿದ್ದ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಹತ್ಯೆ ಆರೋಪಿಗಳಿಗೂ, ಪ್ರತೀಕ್ ಗೂ ಏನು ಲಿಂಕ್ ಇತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
In connection to the Murder of Surendra Bantwal, the Police have taken Akash Bhavan Sharan into Police Custody from Bangalore for 5 days.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am