ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm