ಬ್ರೇಕಿಂಗ್ ನ್ಯೂಸ್
15-06-23 01:30 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ ಕಳವಾಗಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣದ ಪೈಕಿ ಒಂದು ಕೇಜಿ ಐದು ಗ್ರಾಮ್ ಚಿನ್ನ ಮತ್ತು ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2023ರ ಜನವರಿ 15ರಂದು ರಾತ್ರಿ ಕಿನ್ನಿಗೋಳಿಯ ಐಕಳದ ತಾಳಿಪ್ಪಾಡಿಯಲ್ಲಿರುವ ಹೆಸರಾಂತ ಉದ್ಯಮಿ ಹರೀಶ್ ಶೆಟ್ಟಿ ಅವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಪಜೆರೋ ಕಾರನ್ನು ಕಳವುಗೈಯಲು ನಾಲ್ವರಿದ್ದ ತಂಡ ಹೊಕ್ಕಿತ್ತು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಮದುವೆಯ ನಿಮಿತ್ತ ಹರೀಶ್ ಶೆಟ್ಟಿ ಕುಟುಂಬ ಊರಿಗೆ ಬಂದು ಮುಂಬೈಗೆ ಮರಳಿತ್ತು. ಕಾರಿನ ಕೀ ಪಡೆಯುವುದಕ್ಕಾಗಿ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದರು. ಮನೆಯ ಕಪಾಟು ಒಡೆದು ನೋಡಿದಾಗ, ಚಿನ್ನದ ಆಭರಣಗಳ ರಾಶಿಯೇ ಸಿಕ್ಕಿತ್ತು. ಆರೋಪಿಗಳು ಸದ್ದಿಲ್ಲದೆ, ಬಂದಿದ್ದ ಕಾರಿನಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.
ಕೃತ್ಯದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಸಿಸಿಬಿ ಪೊಲೀಸರು ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಗಣೇಶ್ ನಾಯ್ಕ್ (26) ಮತ್ತು ವಿರಾಜಪೇಟೆ ತಾಲೂಕಿನ ಸಿದ್ಧಾಪುರ ಗ್ರಾಮದ ನಿವಾಸಿ ರಂಜಿತ್ ಕೆ.ಆರ್.(26) ಬಂಧಿತರು. ಇವರನ್ನು ಬೆಂಗಳೂರಿನಿಂದ ವಶಕ್ಕೆ ಪಡೆದಿದ್ದು ಒಂದು ಕೆಜಿ ಐದು ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 56.50 ಲಕ್ಷ ಆಗಬಹುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
ಕಳವು ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರು ಎರಡು ಕೆಜಿ ಚಿನ್ನ ಕಳವು ಆಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದರು. ಇನ್ನಿಬ್ಬರು ಆರೋಪಿಗಳು ಕೇರಳದಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆರೋಪಿ ಗಣೇಶ್ ನಾಯ್ಕ್ ಮತ್ತು ಇತರ ಇಬ್ಬರು ಆರೋಪಿಗಳು ಮಂಗಳೂರಿನ ಕುಲಶೇಖರದ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯ ಬಾಗಿಲು ಒಡೆದು ಬೆಲೆಬಾಳುವ ವಸ್ತುಗಳನ್ನು ಕಳವು ನಡೆಸಿದ್ದರು. ಹಾಗೂ ಮಾರುತಿ ಬ್ರೀಜಾ ಕಾರನ್ನು ಕಳವು ಮಾಡಿದ್ದರು. ಪೊಲೀಸರ ತನಿಖೆಯಲ್ಲಿ ಈ ಕೃತ್ಯ ಕೂಡ ಪತ್ತೆಯಾಗಿದೆ. ಗಣೇಶ್ ನಾಯ್ಕ್ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆನಂತರ ಅಲ್ಲಿನ ಜೈಲಿನಲ್ಲಿದ್ದಾಗ ಇತರ ಆರೋಪಿಗಳ ಸಂಪರ್ಕ ಆಗಿತ್ತು. ಜೈಲಿನಿಂದ ಹೊರಬಂದ ಬಳಿಕ ಉದ್ಯಮಿ ಹರೀಶ್ ಶೆಟ್ಟಿ ಮನೆಯಿಂದ ಕಳವಿಗೆ ಸಂಚು ನಡೆಸಿದ್ದರು. ಹರೀಶ್ ಶೆಟ್ಟಿ ಮನೆಯಲ್ಲಿ ವಾಚ್ ಮನ್ ಗಳಿದ್ದು ಮನೆಯ ಹಿಂಭಾಗದ ಕಟ್ಟಡದಲ್ಲಿ ಮಲಗಿದ್ದರು. ಕಳ್ಳರು ನುಗ್ಗಿ ಚಿನ್ನಾಭರಣ ಹೊತ್ತೊಯ್ದಿದ್ದು ಅವರಿಗೆ ತಿಳಿಯಲೇ ಇಲ್ಲ.
Robbery of Gold at Aikala Harish Shetty house in Mangalore, two arrested by CCB police, 1 kilo gold recovered. The arrested have been identified as Ganesh Naik, Ranjith.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm