ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm