ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.
ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.
ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm