ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm