ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 06:03 pm
HK News Staffer
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm