ಬ್ರೇಕಿಂಗ್ ನ್ಯೂಸ್
25-06-23 11:11 am HK News Desk ಕ್ರೈಂ
ಚಿಕ್ಕಬಳ್ಳಾಪುರ, ಜೂನ್ 25: ಸಾಫ್ಟ್ ವೇರ್ ಇಂಜಿನಿಯರ್ನನ್ನು ಕಿಡ್ನಾಪ್ ಮಾಡಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಟೆಕ್ಕಿಯನ್ನು ಕಿಡ್ನಾಪ್ ಮಾಡಿದ ಬಳಿಕ ಮೂರು ದಿನಗಳ ರೆಸಾರ್ಟ್ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ಮಾಡಿದ ಎರಡು ಲ್ಯಾಪ್ ಟಾಪ್, ಮೂರು ಮೊಬೈಲ್, 12 ಗ್ರಾಂ ಬಂಗಾರದ ಚೈನ್ ಸೇರಿದಂತೆ 21 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ವಿಜಯಸಿಂಗ್ ಎಂಬಾತನನ್ನು ಆತನ ಪ್ರಿಯತಮೆಯ ನೆರವಿನೊಂದಿಗೆ ದೇವನಹಳ್ಳಿಗೆ ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳು ಆತನನ್ನು ಅಲ್ಲಿಂದ ಕಿಡ್ನಾಪ್ ಮಾಡಿದ್ದರು. ಆ ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ಇರುವ ಕ್ಯೂ.ವಿ.ಸಿ ವಿಲ್ಲಾ ರೆಸಾರ್ಟ್ಗೆ ಕರೆತಂದಿದ್ದ ಆರೋಪಿಗಳು ಆತನನ್ನು ವಿಲ್ಲಾದ ರೂಮ್ ನಂಬರ್ 36ರಲ್ಲಿ ಕೂಡಿ ಹಾಕಿ ಮೂರು ದಿನಗಳ ಕಾಲ ಹಲ್ಲೆ ಮಾಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಅನಂತಪುರ ನಿವಾಸಿಯಾಗಿರುವ ವಿಜಯಸಿಂಗ್ಗೆ ಜೂನ್ 16ರಿಂದ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದ ಆರೋಪಿಗಳು, ಆತನ ಬಳಿ ಬೆಲೆಬಾಳುವ ವಸ್ತುಗಳು ಸೇರಿದಂತೆ 21 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಟೆಕ್ಕಿ ವಿಜಯಸಿಂಗ್, ಪ್ರಿಯತಮೆ ಭಾವನಾ ರೆಡ್ಡಿ ಸೇರಿದಂತೆ ಪುಲ್ಲಾರೆಡ್ಡಿ, ಸುಬ್ರಮಣಿ, ನಾಗೇಶ ರೆಡ್ಡಿ, ಸಿದ್ದೇಶ , ಸುದೀರ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 506, 341, 504, 143, 149, 384, 323, 324 ಅಡಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿಜಯಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
An incident where a software engineer was kidnapped and robbed in a cinematic manner took place in Chikkaballapura. It has come to light that after the techie was kidnapped, the miscreants who had gathered in a resort for three days, attacked him and transferred 21 lakh rupees including two laptops, three mobile phones and a 12 gram gold chain.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm