ಬ್ರೇಕಿಂಗ್ ನ್ಯೂಸ್
25-06-23 11:11 am HK News Desk ಕ್ರೈಂ
ಚಿಕ್ಕಬಳ್ಳಾಪುರ, ಜೂನ್ 25: ಸಾಫ್ಟ್ ವೇರ್ ಇಂಜಿನಿಯರ್ನನ್ನು ಕಿಡ್ನಾಪ್ ಮಾಡಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಟೆಕ್ಕಿಯನ್ನು ಕಿಡ್ನಾಪ್ ಮಾಡಿದ ಬಳಿಕ ಮೂರು ದಿನಗಳ ರೆಸಾರ್ಟ್ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ಮಾಡಿದ ಎರಡು ಲ್ಯಾಪ್ ಟಾಪ್, ಮೂರು ಮೊಬೈಲ್, 12 ಗ್ರಾಂ ಬಂಗಾರದ ಚೈನ್ ಸೇರಿದಂತೆ 21 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ವಿಜಯಸಿಂಗ್ ಎಂಬಾತನನ್ನು ಆತನ ಪ್ರಿಯತಮೆಯ ನೆರವಿನೊಂದಿಗೆ ದೇವನಹಳ್ಳಿಗೆ ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳು ಆತನನ್ನು ಅಲ್ಲಿಂದ ಕಿಡ್ನಾಪ್ ಮಾಡಿದ್ದರು. ಆ ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ಇರುವ ಕ್ಯೂ.ವಿ.ಸಿ ವಿಲ್ಲಾ ರೆಸಾರ್ಟ್ಗೆ ಕರೆತಂದಿದ್ದ ಆರೋಪಿಗಳು ಆತನನ್ನು ವಿಲ್ಲಾದ ರೂಮ್ ನಂಬರ್ 36ರಲ್ಲಿ ಕೂಡಿ ಹಾಕಿ ಮೂರು ದಿನಗಳ ಕಾಲ ಹಲ್ಲೆ ಮಾಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಅನಂತಪುರ ನಿವಾಸಿಯಾಗಿರುವ ವಿಜಯಸಿಂಗ್ಗೆ ಜೂನ್ 16ರಿಂದ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದ ಆರೋಪಿಗಳು, ಆತನ ಬಳಿ ಬೆಲೆಬಾಳುವ ವಸ್ತುಗಳು ಸೇರಿದಂತೆ 21 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಟೆಕ್ಕಿ ವಿಜಯಸಿಂಗ್, ಪ್ರಿಯತಮೆ ಭಾವನಾ ರೆಡ್ಡಿ ಸೇರಿದಂತೆ ಪುಲ್ಲಾರೆಡ್ಡಿ, ಸುಬ್ರಮಣಿ, ನಾಗೇಶ ರೆಡ್ಡಿ, ಸಿದ್ದೇಶ , ಸುದೀರ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 506, 341, 504, 143, 149, 384, 323, 324 ಅಡಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿಜಯಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
An incident where a software engineer was kidnapped and robbed in a cinematic manner took place in Chikkaballapura. It has come to light that after the techie was kidnapped, the miscreants who had gathered in a resort for three days, attacked him and transferred 21 lakh rupees including two laptops, three mobile phones and a 12 gram gold chain.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm