ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am