ಬ್ರೇಕಿಂಗ್ ನ್ಯೂಸ್
28-06-23 03:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 28: ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.
ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.
ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಇದೇ ರೀತಿಯ ಹಿನ್ನೆಲೆ ಹೊಂದಿದ್ದು, ಯುವಕರನ್ನು ಬಲೆಗೆ ಕೆಡವಿ ಹಣ ಮಾಡಿಕೊಳ್ಳುತ್ತಿದ್ದಳು. ಪ್ರೀತಮ್ ಅಲಿಯಾಸ್ ಸುರೇಂದ್ರ ಬೋಂದೆಲ್ ನಿವಾಸಿಯಾಗಿದ್ದು, 420 ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾನೆ. ಸೆಕ್ಯುರಿಟಿ ಗಾರ್ಡ್ ಒಬ್ಬನಿಗೆ ಹಲ್ಲೆಗೈದ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
Mangalore Honey Trap Case, Eight including girl from Moodbidri arrested by CCB police. The incident took place at a private resort in Vamamjoor. The youth from kerala was honey trapped and had threatned him of Nude photos and video.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm