ಬ್ರೇಕಿಂಗ್ ನ್ಯೂಸ್
28-06-23 10:16 pm Mangalore Correspondent ಕ್ರೈಂ
ಉಳ್ಳಾಲ, ಜೂ.28: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಒಬ್ಬಂಟಿ ಅವಿವಾಹಿತ 53 ವರ್ಷ ಪ್ರಾಯದ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.
2020ನೇ ಇಸವಿ ಸೆಪ್ಟೆಂಬರ್ 24 ರಂದು ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕಣಂತೂರು, ಬೆಳ್ಳೇರಿ ಎಂಬಲ್ಲಿ ಒಂಟಿಯಾಗಿ ವಾಸವಿದ್ದ 53 ವರ್ಷದ ಅವಿವಾಹಿತ ಮಹಿಳೆ ಕುಸುಮಾ ತನ್ನದೇ ಮನೆಯಲ್ಲಿ ನಗ್ನಸ್ಥಿತಿಯಲ್ಲಿ ಕೊಲೆಯಾದ ರೀತಿ ಕಂಡುಬಂದಿದ್ದರು. ನೆರೆ ಮನೆಯವರಿಂದ ಕುಸುಮಾ ಸಾವಿನ ವಿಚಾರ ಬೆಳಕಿಗೆ ಬಂದಿತ್ತು. ಕೊಣಾಜೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಕೆಲವೇ ದಿನಗಳಲ್ಲಿ ಒಂಟಿ ಮಹಿಳೆಯ ಅತ್ಯಾಚಾರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿ, ಕಾಸರಗೋಡು ಜಿಲ್ಲೆಯ ಗಡಿಭಾಗದ ಪಾತೂರು ನಿವಾಸಿ ಕೂಲಿ ಕಾರ್ಮಿಕನಾಗಿದ್ದ ಅಶ್ರಫ್ ನನ್ನು ಬಂಧಿಸಿದ್ದರು.
ಆರೋಪಿ ಅಶ್ರಫ್ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರಗೈದು, ಆಕೆಯ ಕಿವಿ ಓಲೆ ಮತ್ತು ಮನೆಯಲ್ಲಿದ್ದ 15 ಸಾವಿರ ನಗದನ್ನು ಕದ್ದು ಪರಾರಿಯಾಗಿದ್ದ. ಪೊಲೀಸರು ಮಹಿಳೆಯ ಶವದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದಾಗಿ ವರದಿ ಬಂದಿತ್ತು. ಅಂದಿನ ಎಸಿಪಿ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ತನಿಖೆಯ ಜಾಡು ಹಿಡಿದ ಪೊಲೀಸರು ಪಾತೂರು ನಿವಾಸಿ ಅಶ್ರಫ್ ನನ್ನ ಬಂಧಿಸಿದ್ದರು.
ಕೊಲೆ ನಡೆದ ಕೆಲವೇ ದಿನಗಳ ಹಿಂದೆ ಅಶ್ರಫ್, ಕುಸುಮಾ ಅವರ ಮನೆಗೆ ಕೂಲಿ ಕೆಲಸಕ್ಕೆ ಬಂದಿದ್ದ. ಬಾವಿಗೆ ಬಿದ್ದಿದ್ದ ಹೆಬ್ಬಾವು ತೆಗೆಯುವುದಕ್ಕೂ ಸಹಕರಿಸಿದ್ದ. ಮಹಿಳೆ ಒಂಟಿಯಾಗಿರುವುದು, ಮನೆ ತುಂಬಾ ಅಡಿಕೆ ಬೆಳೆ ಇರುವುದನ್ನು ಗಮನಿಸಿ ಲಕ್ಷಾಂತರ ರೂಪಾಯಿ ಹಣ ಮನೆಯಲ್ಲಿ ಇರಬಹುದು ಎಂದು ಕಳ್ಳತನಕ್ಕೆ ಯೋಜನೆ ಹಾಕಿದ್ದ. ಅದರಂತೆ, ಮನೆಗೆ ನುಗ್ಗಿದ್ದ ಅಶ್ರಫ್ ಗೆ 15,000 ರೂ. ನಗದು ಸಿಕ್ಕಿತ್ತು. ಇಷ್ಟಕ್ಕೆ ಸುಮ್ಮನಾಗದ ಕಿರಾತಕ 53 ವರುಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದು ಆಕೆಯ ಬಳಿಯಿದ್ದ ಚಿನ್ನದ ಆಭರಣಗಳನ್ನ ದೋಚಿ ಪರಾರಿಯಾಗಿದ್ದ.
ತನಿಖೆ ನಡೆಸಿದ್ದ ಕೊಣಾಜೆ ಪೊಲೀಸರು ಆರೋಪಿ ಅಶ್ರಫ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುಧೀರ್ಘ ವಿಚಾರಣೆ, ಸಾಕ್ಷಿಗಳ ಹೇಳಿಕೆ ಪರಿಗಣಿಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಘೋಷಿಸಿದೆ. ಸಂತ್ರಸ್ತ ಮಹಿಳೆಯ ಪರ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದಿಸಿದ್ದ ಸಾಕ್ಷಿಗಳನ್ನು ಹೇಳಿಕೆ ಆಧರಿಸಿ ಕಠಿಣ ಶಿಕ್ಷೆಗೆ ಒತ್ತಾಯ ಮಾಡಿದ್ದರು. 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ್ದು ಆರೋಪಿ ಅಶ್ರಫ್ ಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 3 ಲಕ್ಷ ರೂ. ದಂಡ ವಿಧಿಸಿದ್ದಾರೆ.
A man from Varkady in Manjeshwar has been convicted in the case of raping and murdering a woman at her house at Belleri in Balepuni village. The convict is Muhammad Ashraf alias Ahsraf (33). The incident had occurred on September 24, 2020. Ashraf who is married and has two children, was working in the plantation of the brother of the woman. He had noticed that the woman was living alone.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm