ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm