ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm