ಬ್ರೇಕಿಂಗ್ ನ್ಯೂಸ್
07-07-23 07:19 pm HK News Desk ಕ್ರೈಂ
ಕಲಬುರಗಿ, ಜು 7: ಒಂಬತ್ತು ವರ್ಷದ ಬಾಲಕಿ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.
ಈ ಘಟನೆ ಜುಲೈ 5ರಂದು ಮಧ್ಯಾಹ್ನ ಬಾಲಕಿಯ ಮನೆ ಮೇಲಿನ ಮಹಡಿಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದವರನ್ನು ನಾಲ್ವರ ಅಪ್ರಾಪ್ತ ವಯಸ್ಸಿನ ಹುಡುಗರು ಎಂದು ಗುರುತಿಸಲಾಗಿದೆ. ಬಾಲಕಿ ಪೋಷಕರು ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾಲಕಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಬಾಲಕಿಯ ಪೋಷಕರು ಒಂದು ವಾರದ ಹಿಂದಷ್ಟೇ ಬಡಾವಣೆಯ ಮನೆಗೆ ಬಾಡಿಗೆಗೆ ಬಂದಿದ್ದರು. ಬುಧವಾರ ಮಧ್ಯಾಹ್ನ ಬಾಲಕಿ ಮನೆಯ ಎದುರು ಕುಳಿತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಮೂವರು ಬಾಲಕರು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ಮನೆಯೊಂದಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತೆ ಹಿಂದಿನ ದಿನ ಶಾಲೆಗೆ ಹೋಗಿದ್ದಳು ಮತ್ತು ಮನೆಗೆ ಹಿಂತಿರುಗಿದ ನಂತರ ಬಾದಾಮಿಯನ್ನು ಒಡೆಯಲು ಪ್ರತಯ್ನಿಸುತ್ತಾ ಕುಳಿತಿದ್ದ ವೇಳೆ ಬಾಲಕರ ಗುಂಪು ಆಕೆಯನ್ನು ಕರೆದೊಯ್ದಿದೆ. ಕೃತ್ಯ ಎಸಗಿದ ನಂತರ ಆರೋಪಿಗಳು ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದು, ಯಾರೊಂದಿಗಾದರೂ ಬಾಯಿಬಿಟ್ಟರೆ ಆಕೆಯನ್ನು ಕೊಲ್ಲುವುದಾಗಿ ಹೇಳಿದ್ದಾರೆ.
ಆಘಾತಕ್ಕೊಳಗಾದ ಬಾಲಕಿ ಮನೆಗೆ ಬಂದು ತಾಯಿಯ ಬಳಿ ಕೃತ್ಯವನ್ನು ಹೇಳಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 366 ಎ (ಲೈಂಗಿಕ ಅಪರಾಧಕ್ಕಾಗಿ ಅಪ್ರಾಪ್ತ ಬಾಲಕಿಯ ವಶ), 376 (ಜಿ) (ಗ್ಯಾಂಗ್-ರೇಪ್), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A group of four minor boys is said to have molested a nine-year-old girl in Kalaburagi at noon on Wednesday. Following a complaint by the girl’s father, a case has been registered in the Kalaburagi Women Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm