ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 06:03 pm
HK News Staffer
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm