ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm