ಬ್ರೇಕಿಂಗ್ ನ್ಯೂಸ್
10-07-23 08:16 pm HK News Desk ಕ್ರೈಂ
ಮೈಸೂರು, ಜುಲೈ 10: ಇದೊಂದು ಮಂಗಳೂರಿನ ಸೈನೇಡ್ ಮೋಹನ್ ಎಂಬ ಕಿಲ್ಲರ್ ರೀತಿಯ ಕತೆ. ಈತನಿಗೂ ವಿಧವೆಯರು ಹಾಗೂ ಮದುವೆಯಾಗದೆ ಉಳಿದಿರುವ ವಯಸ್ಸು ಮೀರಿದ ಮಹಿಳೆಯರೇ ಟಾರ್ಗೆಟ್. ಮ್ಯಾಟ್ರಿಮೋನಿಯಲ್ ಸೈಟ್ ನಲ್ಲಿ ಸಂಪರ್ಕಿಸಿ ನಂಬಿಸಿ, ಮದುವೆಯಾಗುವುದಲ್ಲದೆ ಮಹಿಳೆಯರದ್ದೇ ಹಣ ಹಾಗೂ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ.
ಬೆಂಗಳೂರು ಮೂಲದ ಖತರ್ನಾಕ್ ವ್ಯಕ್ತಿಯನ್ನು ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈವರೆಗೂ ಈತ 15ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದಾನೆಂದು ತನಿಖೆಯಲ್ಲಿ ತಿಳಿದುಬಂದಿದೆ. ಬೆಂಗಳೂರಿನ ಬನಶಂಕರಿ 3ನೇ ಹಂತ ಹೊಸಕೆರೆಹಳ್ಳಿ ಕಾಳಿದಾಸನಗರ ನಿವಾಸಿ ಬಸವೇಗೌಡ ಎಂಬವರ ಪುತ್ರ ಕೆ.ಬಿ.ಮಹೇಶ್ (35) ಬಂಧಿತ ಆರೋಪಿ. ಈತನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್ಲೈಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿದ್ದಾರೆ.
ಬೆಂಗಳೂರಿನ ಮಹೇಶ್, ಮೈಸೂರಿನ ಹೇಮಲತಾ ಎಂಬವರನ್ನು ಶಾದಿ ಡಾಟ್ ಕಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ತಾನು ಡಾಕ್ಟರ್ ಎಂದು ಹೇಳಿಕೊಂಡು ನಂಬಿಸಿದ್ದಲ್ಲದೆ, ನಂತರ ಮದುವೆಯಾಗಿದ್ದ. ಆದರೆ ಸುತ್ತಾಟ ಎಲ್ಲ ಮುಗಿದ ಬಳಿಕ ಆಕೆಯದ್ದೇ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಸದ್ದಿಲ್ಲದೆ ಪರಾರಿಯಾಗಿದ್ದ. ಈ ಬಗ್ಗೆ ಹೇಮಲತಾ ನೀಡಿದ್ದ ದೂರಿನಂತೆ ಕುವೆಂಪುನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಮಹೇಶ್ನನ್ನು ಬಂಧಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ತಾನು ಡಾಕ್ಟರ್, ಎಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು 15 ಮಹಿಳೆಯರಿಗೆ ವಂಚಿಸಿರುವುದಾಗಿ ಹೇಳಿದ್ದಾನೆ.

ಶಾದಿ.ಕಾಂ ಮೂಲಕ ಹೇಮಲತಾರನ್ನು ಸಂಪರ್ಕಿಸಿದ್ದ ಮಹೇಶ್, ಮೈಸೂರಿನ ಆರ್.ಟಿ.ನಗರದಲ್ಲಿರುವ ಮನೆ ತೋರಿಸಿ ನಂಬಿಸಿದ್ದಾನೆ. ಈತನ ಮಾತು ನಂಬಿದ ಹೇಮಲತಾ ಜ.28ರಂದು ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದರು. ನಂತರ ಮೈಸೂರಿನ ಮನೆಗೆ ಬಂದು ನೆಲೆಸಿದ್ದರು. ಈ ವೇಳೆ ವಿಜಯನಗರ 4ನೇ ಹಂತದಲ್ಲಿ ತಾನು ಕ್ಲಿನಿಕ್ ಓಪನ್ ಮಾಡಬೇಕೆಂದು ಕಾರಣ ನೀಡಿ 70 ಲಕ್ಷ ಸಾಲ ತೆಗೆಯಲು ಒತ್ತಡ ಹೇರಿದ್ದು, ಹಣ ಕೊಡಲು ಹೇಮಲತಾ ಒಪ್ಪದೇ ಇದ್ದಾಗ ಕೊಲೆ ಬೆದರಿಕೆ ಹಾಕಿದ್ದ.
ಆಬಳಿಕ ಹೇಮಲತಾ ಮನೆಯಲ್ಲಿ ಇಲ್ಲದೇ ಇದ್ದಾಗ 2.15 ಲಕ್ಷ ನಗದು ಹಾಗೂ 20 ಗ್ರಾಂ ಚಿನ್ನಾಭರಣ ಕಿತ್ತುಕೊಂಡು ಮನೆಯಿಂದ ಪರಾರಿಯಾಗಿದ್ದ. ಆನಂತರ, ಮಹೇಶ್ ಬಗ್ಗೆ ಹೇಮಲತಾ ಹುಡುಕಾಟ ನಡೆಸಿದ್ದು ಹಿನ್ನೆಲೆ ಅರಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ, ಮಹೇಶ್ ಈ ಮೊದಲೇ ಮದುವೆಯಾಗಿರುವುದು ತಿಳಿದುಬಂದಿತ್ತು. ಕೆಲವೇ ದಿನಗಳಲ್ಲಿ ಬೆಂಗಳೂರಿನ ದಿವ್ಯಾ ಎಂಬವರು ಹೇಮಲತಾ ಮನೆಗೆ ಬಂದು ತನ್ನನ್ನೂ ಮಹೇಶ್ ಮದುವೆ ಆಗಿದ್ದಾನೆಂದು ತಿಳಿಸಿದ್ದಾರೆ. ಮಹೇಶ್ ಕಪಟಿ ಎನ್ನುವುದು ತಿಳಿಯುತ್ತಲೇ ಹೇಮಲತಾ ಕುವೆಂಪುನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Bengalore resident marries at least 15 women by posing as doctor, engineer, arrested after nearly a decade by Mysuru police. Mysuru city police Sunday arrested a man who cheated women he met on matrimonial websites by posing as an engineer or doctor and marrying them. Officers suspect he has married at least 15 women since 2014 and have at least four children.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm