ಬ್ರೇಕಿಂಗ್ ನ್ಯೂಸ್
10-07-23 10:41 pm HK News Desk ಕ್ರೈಂ
ಮೈಸೂರು, ಜುಲೈ 10: ಹನುಮಜಯಂತಿ ನಡೆಯುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಸಂಧಾನಕ್ಕಾಗಿ ಕರೆದು ಯುವಕನೊಬ್ಬನ್ನು ಕೊಲೆ ಮಾಡಿದ ಘಟನೆ ತಿ.ನರಸೀಪುರ ಪಟ್ಟಣದ ಅಗ್ನಿಶಾಮಕ ದಳದ ಕಚೇರಿ ಮುಂದೆ ಮಾರುತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.
ಟಿ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಈತ ಕಳೆದ ಕೆಲವು ವರ್ಷಗಳಿಂದ ಯುವ ಬ್ರಿಗೇಡ್ ನ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದ.

ಮೊನ್ನೆ ನಡೆದ ಹನುಮ ಜಯಂತಿ ವೇಳೆ ಮೆರವಣಿಗೆಯಲ್ಲಿ ಪುನೀತ್ ರಾಜಕುಮಾರ್ ಫೋಟೋ ಇಡುವ ಸಂಬಂಧ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಸ್ಥಳದಲ್ಲಿದ್ದ ಕೆಲವರು ಈ ವೇಳೆ ಎರಡು ಗುಂಪುಗಳ ನಡುವೆ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು. ಆದರೆ, ಭಾನುವಾರ ಕೂಡ ಈ ಬಗ್ಗೆ ಎರಡು ಗುಂಪುಗಳ ನಡುವಿನ ಗಲಾಟೆ ನಡೆದು ಆರೋಪಿತ ಮಣಿ ಮತ್ತು ಅವರ ತಂಡ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿತ್ತು, ಅಲ್ಲೂ ಕೂಡ ಕೆಲವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು.
ಮತ್ತೆ ಭಾನುವಾರ ರಾತ್ರಿ 8.30 ಸಮಯದಲ್ಲಿ ಆರೋಪಿಗಳಲ್ಲಿ ಒಬ್ಬನಾದ ಮಣಿ ಎಂಬುವನು ವೇಣುಗೋಪಾಲ್ ಗೆ ಕರೆಮಾಡಿ ಮಾತನಾಡಲು ಕರೆದಿದ್ದಾನೆ. ಆದರೆ, ವೇಣುಗೋಪಾಲ್ ಹೋಗಲು ನಿರಾಕರಿಸಿದ್ದನು. ನಂತರ ವೇಣುಗೋಪಾಲ್ ತನ್ನ ಸ್ನೇಹಿತರ ಜೊತೆಗೂಡಿ ಸರ್ವಿಸ್ ಸ್ಟೇಷನ್ ಬಳಿಗೆ ಬಂದಾಗ ಏಕಾಏಕಿ ಬಾಟಲಿನಿಂದ ಹೊಡೆದು, ಹೊಟ್ಟೆಗೆ ಬಾಟಲಿಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ಸಂಬಂಧ ಪಟ್ಟಣದ ನಿವಾಸಿಗಳಾದ ಮಣಿಕಂಠ ಅಲಿಯಾಸ್ ಕೋಳಿ ಮಣಿ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ 6 ಮಂದಿ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿತರ ಇಬ್ಬರು ಪೊಲೀಸರಿಗೆ ಶರಣಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲಿಸಿದರು. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ
ಟಿ ನರಸೀಪುರ ತಾಲೂಕಿನಲ್ಲಿ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಸೆರೆಗೆ ತಂಡ ರಚನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಕ್ ನಿಲ್ಲಿಸುವ ವಿಚಾರ ಹಾಗೂ ನಟ ಅಪ್ಪು ಫೋಟೋ ವಿಚಾರವಾಗಿ ಜಗಳವಾಗಿ ಯುವಕನನ್ನ ಕೊಲೆ ಮಾಡಲಾಗಿದೆ.
Fight over Puneeth Rajkumar Photo, yuva brigade youth murdered in Mysuru, two arrested by Police.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm