ಬ್ರೇಕಿಂಗ್ ನ್ಯೂಸ್
10-07-23 10:41 pm HK News Desk ಕ್ರೈಂ
ಮೈಸೂರು, ಜುಲೈ 10: ಹನುಮಜಯಂತಿ ನಡೆಯುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಸಂಧಾನಕ್ಕಾಗಿ ಕರೆದು ಯುವಕನೊಬ್ಬನ್ನು ಕೊಲೆ ಮಾಡಿದ ಘಟನೆ ತಿ.ನರಸೀಪುರ ಪಟ್ಟಣದ ಅಗ್ನಿಶಾಮಕ ದಳದ ಕಚೇರಿ ಮುಂದೆ ಮಾರುತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.
ಟಿ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಈತ ಕಳೆದ ಕೆಲವು ವರ್ಷಗಳಿಂದ ಯುವ ಬ್ರಿಗೇಡ್ ನ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದ.

ಮೊನ್ನೆ ನಡೆದ ಹನುಮ ಜಯಂತಿ ವೇಳೆ ಮೆರವಣಿಗೆಯಲ್ಲಿ ಪುನೀತ್ ರಾಜಕುಮಾರ್ ಫೋಟೋ ಇಡುವ ಸಂಬಂಧ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಸ್ಥಳದಲ್ಲಿದ್ದ ಕೆಲವರು ಈ ವೇಳೆ ಎರಡು ಗುಂಪುಗಳ ನಡುವೆ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು. ಆದರೆ, ಭಾನುವಾರ ಕೂಡ ಈ ಬಗ್ಗೆ ಎರಡು ಗುಂಪುಗಳ ನಡುವಿನ ಗಲಾಟೆ ನಡೆದು ಆರೋಪಿತ ಮಣಿ ಮತ್ತು ಅವರ ತಂಡ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿತ್ತು, ಅಲ್ಲೂ ಕೂಡ ಕೆಲವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು.
ಮತ್ತೆ ಭಾನುವಾರ ರಾತ್ರಿ 8.30 ಸಮಯದಲ್ಲಿ ಆರೋಪಿಗಳಲ್ಲಿ ಒಬ್ಬನಾದ ಮಣಿ ಎಂಬುವನು ವೇಣುಗೋಪಾಲ್ ಗೆ ಕರೆಮಾಡಿ ಮಾತನಾಡಲು ಕರೆದಿದ್ದಾನೆ. ಆದರೆ, ವೇಣುಗೋಪಾಲ್ ಹೋಗಲು ನಿರಾಕರಿಸಿದ್ದನು. ನಂತರ ವೇಣುಗೋಪಾಲ್ ತನ್ನ ಸ್ನೇಹಿತರ ಜೊತೆಗೂಡಿ ಸರ್ವಿಸ್ ಸ್ಟೇಷನ್ ಬಳಿಗೆ ಬಂದಾಗ ಏಕಾಏಕಿ ಬಾಟಲಿನಿಂದ ಹೊಡೆದು, ಹೊಟ್ಟೆಗೆ ಬಾಟಲಿಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ಸಂಬಂಧ ಪಟ್ಟಣದ ನಿವಾಸಿಗಳಾದ ಮಣಿಕಂಠ ಅಲಿಯಾಸ್ ಕೋಳಿ ಮಣಿ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ 6 ಮಂದಿ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿತರ ಇಬ್ಬರು ಪೊಲೀಸರಿಗೆ ಶರಣಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲಿಸಿದರು. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ
ಟಿ ನರಸೀಪುರ ತಾಲೂಕಿನಲ್ಲಿ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಸೆರೆಗೆ ತಂಡ ರಚನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಕ್ ನಿಲ್ಲಿಸುವ ವಿಚಾರ ಹಾಗೂ ನಟ ಅಪ್ಪು ಫೋಟೋ ವಿಚಾರವಾಗಿ ಜಗಳವಾಗಿ ಯುವಕನನ್ನ ಕೊಲೆ ಮಾಡಲಾಗಿದೆ.
Fight over Puneeth Rajkumar Photo, yuva brigade youth murdered in Mysuru, two arrested by Police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm