ಬ್ರೇಕಿಂಗ್ ನ್ಯೂಸ್
03-11-20 03:47 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 03: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಪ್ರತೀಕ್ ಮತ್ತು ಮಂಗಳೂರಿನ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆ ಪ್ರಕರಣದಲ್ಲಿ ಇವರು, ಪ್ರಮುಖ ಆರೋಪಿಗಳು ಬಚಾವಾಗಲು ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ಕುಲಾಲ್ ಮತ್ತು ಗಿರೀಶನಿಗೆ ಕೊಲೆಗೈದ ಬಳಿಕ ಬೆಳ್ತಂಗಡಿಯಲ್ಲಿ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆಯನ್ನು ಪ್ರತೀಕ್ ಮಾಡಿದ್ದು ಅದಕ್ಕಾಗಿ 2.5 ಲಕ್ಷ ರೂ. ಹಣ ಪಡೆದಿದ್ದ. ಇನ್ನು ಮಂಗಳೂರಿನ ಕೊಂಚಾಡಿ ನಿವಾಸಿ ಜಯೇಶ್, ಪ್ರಮುಖ ಆರೋಪಿ ಆಕಾಶಭವನ್ ಶರಣ್ ಅಣತಿಯಂತೆ ಸುಪಾರಿ ಹಣವನ್ನು ಆರೋಪಿ ಪ್ರದೀಪನಿಂದ ಪಡೆದು ಕೊಲೆಗೆ ವ್ಯವಸ್ಥೆ ಮಾಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಪ್ರತೀಕ್ ಕೋಟ್ಯಾನ್ ಈ ಹಿಂದೆ ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡಿದ್ದು ಬಳಿಕ ಬೆಳ್ತಂಗಡಿಯಲ್ಲಿ ಮಾಧ್ಯಮದ ವ್ಯಕ್ತಿಯೆಂದು ಹೇಳಿ ಓಡಾಡಿಕೊಂಡಿದ್ದ. ಇತ್ತೀಚೆಗೆ ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲೂ ಬಂಧಿಸಲ್ಪಟ್ಟಿದ್ದ. ಜಯೇಶ್, ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸಂಘಟನೆಯಲ್ಲಿ ಗುರುತಿಸಿದ್ದು ಮಂಗಳೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಪೋಸ್ಟರ್ ಗಳಲ್ಲಿ ಆತನ ಫೋಟೊ ಕಾಣಿಸಿಕೊಂಡಿತ್ತು.




ಈಗಾಗ್ಲೇ ಬಂಟ್ವಾಳ ಪೊಲೀಸರು ಪ್ರಕರಣ ಸಂಬಂಧಿಸಿ 9 ಮಂದಿಯನ್ನು ಬಂಧಿಸಿತ್ತು. ಇವರಿಬ್ಬರನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ಬಂಧಿಸಿದ್ದು ಒಟ್ಟು ಬಂಧಿತರ ಸಂಖ್ಯೆ 11 ಕ್ಕೇರಿದೆ.
In connection to the Murder of Surendra Bantwal, the police have arrested two more persons. The arrested are identified as Pratheek Kotyan from Belthanagady and Jayesh Sachu from Mangalore. Total number of arrest has raised to 11.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am