ಬ್ರೇಕಿಂಗ್ ನ್ಯೂಸ್
03-11-20 03:47 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 03: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಪ್ರತೀಕ್ ಮತ್ತು ಮಂಗಳೂರಿನ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆ ಪ್ರಕರಣದಲ್ಲಿ ಇವರು, ಪ್ರಮುಖ ಆರೋಪಿಗಳು ಬಚಾವಾಗಲು ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ಕುಲಾಲ್ ಮತ್ತು ಗಿರೀಶನಿಗೆ ಕೊಲೆಗೈದ ಬಳಿಕ ಬೆಳ್ತಂಗಡಿಯಲ್ಲಿ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆಯನ್ನು ಪ್ರತೀಕ್ ಮಾಡಿದ್ದು ಅದಕ್ಕಾಗಿ 2.5 ಲಕ್ಷ ರೂ. ಹಣ ಪಡೆದಿದ್ದ. ಇನ್ನು ಮಂಗಳೂರಿನ ಕೊಂಚಾಡಿ ನಿವಾಸಿ ಜಯೇಶ್, ಪ್ರಮುಖ ಆರೋಪಿ ಆಕಾಶಭವನ್ ಶರಣ್ ಅಣತಿಯಂತೆ ಸುಪಾರಿ ಹಣವನ್ನು ಆರೋಪಿ ಪ್ರದೀಪನಿಂದ ಪಡೆದು ಕೊಲೆಗೆ ವ್ಯವಸ್ಥೆ ಮಾಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಪ್ರತೀಕ್ ಕೋಟ್ಯಾನ್ ಈ ಹಿಂದೆ ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡಿದ್ದು ಬಳಿಕ ಬೆಳ್ತಂಗಡಿಯಲ್ಲಿ ಮಾಧ್ಯಮದ ವ್ಯಕ್ತಿಯೆಂದು ಹೇಳಿ ಓಡಾಡಿಕೊಂಡಿದ್ದ. ಇತ್ತೀಚೆಗೆ ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲೂ ಬಂಧಿಸಲ್ಪಟ್ಟಿದ್ದ. ಜಯೇಶ್, ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸಂಘಟನೆಯಲ್ಲಿ ಗುರುತಿಸಿದ್ದು ಮಂಗಳೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಪೋಸ್ಟರ್ ಗಳಲ್ಲಿ ಆತನ ಫೋಟೊ ಕಾಣಿಸಿಕೊಂಡಿತ್ತು.




ಈಗಾಗ್ಲೇ ಬಂಟ್ವಾಳ ಪೊಲೀಸರು ಪ್ರಕರಣ ಸಂಬಂಧಿಸಿ 9 ಮಂದಿಯನ್ನು ಬಂಧಿಸಿತ್ತು. ಇವರಿಬ್ಬರನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ಬಂಧಿಸಿದ್ದು ಒಟ್ಟು ಬಂಧಿತರ ಸಂಖ್ಯೆ 11 ಕ್ಕೇರಿದೆ.
In connection to the Murder of Surendra Bantwal, the police have arrested two more persons. The arrested are identified as Pratheek Kotyan from Belthanagady and Jayesh Sachu from Mangalore. Total number of arrest has raised to 11.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm