ಬ್ರೇಕಿಂಗ್ ನ್ಯೂಸ್
11-07-23 07:36 pm HK News Desk ಕ್ರೈಂ
ಮೈಸೂರು, ಜುಲೈ 11: ಜಿಲ್ಲೆಯ ಟಿ.ನರಸೀಪುರದಲ್ಲಿ ಕಳೆದ ಭಾನುವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್ (31) ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳು ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿ. ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಹನುಮನ ಜೊತೆಗೆ ಪುನೀತ್ ಫೋಟೊ ಇಡುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಪುನೀತ್ ಫೋಟೊ ಇರಿಸುವುದಕ್ಕೆ ವೇಣುಗೋಪಾಲ ವಿರೋಧ ವ್ಯಕ್ತಪಡಿಸಿದ್ದ. ಇದೇ ವಿಚಾರದಲ್ಲಿ ಮಾತನಾಡುವ ನೆಪದಲ್ಲಿ ಕರೆದು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ. ಶನಿವಾರ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದರೂ, ಸಂಧಾನ ಮಾಡಿ ಕಳುಹಿಸಲಾಗಿತ್ತು. ಭಾನುವಾರ ಮತ್ತೆ ಜಗಳ ನಡೆದಿದ್ದು ಈ ವೇಳೆ ವೇಣುಗೋಪಾಲ್ ಮೇಲೆ ಚೂರಿಯಿಂದ ಇರಿಯಲಾಗಿತ್ತು. ಪ್ರಕರಣದಲ್ಲಿ ಯಾವುದೇ ರೀತಿಯ ಕೋಮು ದ್ವೇಷದ ವಿಷಯ ಇಲ್ಲ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.
ಇದೇ ವೇಳೆ, ಬಿಜೆಪಿ ನಾಯಕರು ಕೃತ್ಯದ ಬಗ್ಗೆ ಸತ್ಯಶೋಧನೆ ನಡೆಸಲೆಂದು ಮೈಸೂರಿಗೆ ಬಂದಿದ್ದಾರೆ. ಆದರೆ ಪೊಲೀಸರು ಬಂಧಿಸಿದ ಆರೋಪಿಗಳ ಪೈಕಿ ಶಂಕರ್ ಎಂಬಾತ ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆಯೊಬ್ಬರ ಸೋದರ ಎನ್ನುವ ವಿಚಾರ ಹೋರಾಟಕ್ಕೆ ಇಳಿದಿದ್ದ ಬಿಜೆಪಿ ನಾಯಕರಿಗೆ ತೀವ್ರ ಇರಿಸುಮುರಿಸು ಮಾಡಿದೆ. ಹಾಗಿದ್ದರೂ, ತಂಡದ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ಸಿಟಿ ರವಿ, ವೇಣುಗೋಪಾಲ್ ನಾಯಕ್ ನಿವಾಸಕ್ಕೆ ಭೇಟಿ ನೀಡಿದರು. ಕುಟುಂಬಸ್ಥರ ಜೊತೆಗೆ ಜೊತೆಗೆ ಮಾತುಕತೆ ನಡೆಸಿ ಮೃತನ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇದುವರೆಗೆ ರಾಜ್ಯದ 16 ರಿಂದ 17 ಕಡೆ ಈ ರೀತಿ ಘಟನೆಗಳು ನಡೆದಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಒಂದು ವಲಯದ ಜನ ಮದೋನ್ಮತ್ತ ಹಾಗೂ ಯುದ್ಧೋತ್ಸಹದಲ್ಲಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸ್ಥಿತಿ ಸೃಷ್ಟಿಯಾಗಿದೆ ಎಂದಿದ್ದಾರೆ.
ಯುವ ಬ್ರಿಗೇಡ್ ರಾಜ್ಯ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯಿಸಿ, ಕೊಲೆಯ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆಯೆಂದು ಆರೋಪಿಸಿದ್ದರು. ಬಿಜೆಪಿ ಕಾರ್ಯಕರ್ತ ಇರುವುದು ಇವರಿಗೂ ತೀವ್ರ ಹಿನ್ನಡೆ ಉಂಟುಮಾಡಿದೆ.
ಪುನೀತ್ ರಾಜಕುಮಾರ್ ಫೋಟೋ ವಿಚಾರಕ್ಕೆ ಗಲಾಟೆ ; ಬಾಟಲಿಗಳಿಂದ ಚುಚ್ಚಿ ಹಿಂದೂ ಕಾರ್ಯಕರ್ತನ ಕೊಲೆ, ಇಬ್ಬರ ಸೆರೆ !
The Mysuru district police have arrested six people in connection with the murder of a 32-year-old member of Yuva Brigade, a right-wing organisation, on Sunday during Hanuman Jayanthi celebrations on the outskirts of T Narasipura. Officials said Tuesday the arrested men have been identified as Manikanta alias Kole Mani, Sandesh, Anil, Shankar, Manju, and Haris.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm