ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.
ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm