ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm