ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm