ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm