ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm