ಬ್ರೇಕಿಂಗ್ ನ್ಯೂಸ್
19-07-23 03:26 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 19: ಸಿಸಿಬಿ ಪೊಲೀಸರು ಭಾರೀ ಭಯೋತ್ಪಾದನಾ ದಾಳಿಯ ಸಂಚನ್ನು ವಿಫಲಗೊಳಿಸಿದ್ದು, ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೇಂದ್ರೀಯ ಅಪರಾಧ ವಿಭಾಗ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ.
ಬಂಧಿತರು ಬೆಂಗಳೂರಿನ ನಿವಾಸಿಗಳಾಗಿದ್ದು, ಸೈಯದ್ ಸುಹೇಲ್, ಉಮರ್, ಜುನೈದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಐವರು ಶಂಕಿತ ಉಗ್ರರ ಮೊಬೈಲ್ ಫೋನ್ಗಳು ಮತ್ತು ಭಾರೀ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳದ ಟೆಕ್ನಿಕಲ್ ಸೆಲ್ನಲ್ಲಿ ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿ ನಡೆಸಲು ಶಂಕಿತ ಉಗ್ರರು ಯೋಜನೆ ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಧಿತರು ಐಸಿಸ್ ಮಾಡ್ಯೂಲ್ನ ಭಾಗವಾಗಿದ್ದು, ಜುನೈದ್ ಅಹ್ಮದ್ ಇವರಿಗೆ ಮುಖ್ಯಸ್ಥನಾಗಿದ್ದ ಎಂದು ತಿಳಿದುಬಂದಿದೆ. ಗುಜರಾತ್ ಗಡಿ ಅಥವಾ ಪಂಜಾಬ್ ಗಡಿಯ ಮೂಲಕ ಸ್ಫೋಟಕಗಳನ್ನು ಸಂಗ್ರಹಿಸಲು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಜುಬೈದ್ 2017ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಆನಂತರ ಹೊರಬಂದು ತಲೆಮರೆಸಿಕೊಂಡಿದ್ದ.

ಬಂಧಿತರು ಜುನೈದ್ ಅಹ್ಮದ್ ತಂಡದವರಾಗಿದ್ದು, ಜುನೈದ್ ನಾಪತ್ತೆಯಾಗಿದ್ದಾನೆ. 2017ರಲ್ಲಿ ಮೂರು ಅಪಹರಣ, ಓರ್ವನ ಹತ್ಯೆ ಪ್ರಕರಣದಲ್ಲಿ ಜುನೈದ್ ಪರಪ್ಪನ ಅಗ್ರಹಾರ ಸೇರಿದ್ದ. ಈ ವೇಳೆ 24 ಆರೋಪಿಗಳನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿಯೇ ಉಗ್ರರ ಜೊತೆ ಸಂಪರ್ಕ ಸಾಧಿಸಿದ್ದ ಜುನೈದ್ ತನ್ನದೇ ತಂಡ ಕಟ್ಟಿಕೊಂಡು ಕೆಲಸ ಮಾಡುವುದಾಗಿ ಉಗ್ರ ಸಂಘಟನೆಯ ಬೆಂಬಲ ಪಡೆದಿದ್ದ. ಇವರೆಲ್ಲ ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲಿ ವಾಸವಿದ್ದು ವಿಧ್ವಂಸಕ ಕೃತ್ಯಕ್ಕೆ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ನಡೆಸುತ್ತಿದ್ದರು.
ಉಗ್ರರ ಟಾರ್ಗೆಟ್ ಬೆಂಗಳೂರು ಆಗಿತ್ತು !
ಶಂಕಿತ ಉಗ್ರರು ಬೆಂಗಳೂರು ನಗರವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದ್ದರು. ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಸಂಪರ್ಕ ಹೊಂದಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು ಅನ್ನೋದರ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು. ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದರು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಆರೋಪಿಗಳಿಂದ 7 ಪಿಸ್ತೂಲ್, 12 ಫೋನ್ಗಳು, 45 ಜೀವಂತ ಗುಂಡು, ವಾಕಿಟಾಕಿ ಸೇರಿ ಹಲವು ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Five suspected terrorists were arrested in Bengaluru today by the Central Crime Branch (CCB) for allegedly planning a terror attack in the Karnataka capital. The police are on the lookout for another suspect, Junaid, from Bengaluru's RT Nagar area, whose current whereabouts are unknown, however, according to the police, the man is believed to be settled abroad and is the mastermind behind providing arms and explosives to the five arrested.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm