ಬ್ರೇಕಿಂಗ್ ನ್ಯೂಸ್
21-07-23 07:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆಸಿ ರೋಡಿನ ನಿಶಾದ್ (31), ಮಹಮ್ಮದ್ ರಜೀನ್ (24) ಬಂಧಿತರು. ಕೇರಳದ ಗಡಿಭಾಗ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಸಿಲ್ವರ್ ಮತ್ತು ಕಪ್ಪು ಬಣ್ಣದ ಎರಡು ಸ್ವಿಫ್ಟ್ ಕಾರಿನಲ್ಲಿದ್ದುಕೊಂಡು ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ಮೌಲ್ಯದ 180 ಗ್ರಾಮ್ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಎರಡು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್, 22 ಸಾವಿರ ರೂ. ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮೂವರು ಡ್ರಗ್ ಕಿಂಗ್ ಪಿನ್ ಗಳಲ್ಲಿ ಒಬ್ಬ
ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಜ್ ಮಂಗಳೂರು ಮಹಾನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುವ ಮೂವರು ಕಿಂಗ್ ಪಿನ್ ಗಳ ಪೈಕಿ ಒಬ್ಬನಾಗಿದ್ದು ಈತನ ಬಂಧನಕ್ಕಾಗಿ ಪೊಲೀಸರು ಹಲವು ಸಮಯದಿಂದ ಹೊಂಚು ಹಾಕಿದ್ದರು. ಆದರೆ ಮೊಬೈಲ್ ಫೋನಲ್ಲಿ ವಾಟ್ಸಪ್ ಕರೆ ಮಾತ್ರ ಮಾಡುವುದು, ಒಂದು ಕಡೆಗೆ ಹೋದ ದಿನ ಮತ್ತೆ ಹೋಗದೇ ಇರುವುದು, ಹೀಗೆ ಪೊಲೀಸರು ಬೆನ್ನು ಬಿದ್ದಾಗ ಕೈಗೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಹಂಚಿಕೆ ಮಾಡುತ್ತಿದ್ದವರಲ್ಲಿ ಈತನೂ ಒಬ್ಬನಾಗಿದ್ದ.
ಈ ಹಿಂದೆ ಮಂಗಳೂರಿನ ಉರ್ವಾ ಠಾಣೆಯ ಎಎಸ್ಐಗೆ ಚೂರಿಯಿಂದ ಇರಿದು ಹಲ್ಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಸೈಬರ್ ಕ್ರೈಂ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ, ಮಂಗಳೂರಿನ ಕಂಕನಾಡಿ ನಗರ, ಕೊಣಾಜೆ ಠಾಣೆ ಸೇರಿದಂತೆ ಮೊಹಮ್ಮದ್ ನಿಯಾಜ್ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಹಲವು ಕೋರ್ಟ್ ವಾರೆಂಟ್ ಗಳಿದ್ದರೂ, ಪೊಲೀಸರ ತಲೆತಪ್ಪಿಸಿಕೊಂಡು ಆಯಕಟ್ಟಿನ ಪೆಡ್ಲರ್ ಗಳಿಗೆ ಡ್ರಗ್ ಪೂರೈಸುತ್ತಿದ್ದ. ನಿಯಾಜ್ ಜೊತೆಗಿದ್ದ ಇನ್ನಿಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Three drug peddlers were arrested by Mangaluru city crime branch police. MDMA, pistol and many other items were seized from them.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm